Webdunia - Bharat's app for daily news and videos

Install App

ಜಯನಗರದಲ್ಲಿ ಸೀಜ್‌ ಆಗಿದ್ದು ಬಿಜೆಪಿ ಕೊಳ್ಳೆ ಹೊಡೆದ ಪಾಪದ ಹಣ: ಸಚಿವ ರಾಮಲಿಂಗಾರೆಡ್ಡಿ

Sampriya
ಶನಿವಾರ, 13 ಏಪ್ರಿಲ್ 2024 (19:21 IST)
Photo Courtesy X
ಬೆಂಗಳೂರು: ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬೆಂಗಳೂರಿನ ಜಯನಗರದಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಕೋಟಿ ಕೋಟಿ ಹಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು  ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದರು. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬಿಜೆಪಿ ಮೇಲೆ ರಾಮಲಿಂಗಾ ರೆಡ್ಡಿ ಆರೋಪ ಮಾಡಿ ಪೋಸ್ಟ್‌ ಹಂಚಿಕೊಂಡಿದ್ದಾರೆ.  

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ.

ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ?

ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಚುನಾವಣೆ ನಡೆಸುವುದು, ಬಹುಮತ ಬರದಿದ್ದಾಗ ನೂರಾರು ಕೋಟಿ ಹಣ ಹಾಕಿ ಶಾಸಕರು, ಸಂಸದರನ್ನು ಖರೀದಿಸುವುದು ಬಿಜೆಪಿ ಜಾಯಮಾನ.

ಈಗ ಅವರ ಹಣವಂತೂ ಹೋಗಿದೆ, ಮಾನವನ್ನಾದರೂ ಉಳಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಕಾಂಗ್ರೆಸ್ ಮೇಲೆ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ.

ಈ ಬಾರಿಯ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಉಂಟಾಗಿದ್ದು, ಲೂಟಿ ಮಾಡಿದ ಹಣವನ್ನೆಲ್ಲ ಖರ್ಚು ಮಾಡಿಯಾದರೂ ಶತಾಯಗತಾಯ ಗೆಲ್ಲಬೇಕು ಎಂದು ಅವರ ತಂಡ ಹೊರಟಿರುವಂತಿದೆ.

ನಾವು ಜನ ಬಲವನ್ನು ನಂಬಿದವರು, ಬಿಜೆಪಿಯಂತೆ ಹಣ ಬಲವನ್ನಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments