Webdunia - Bharat's app for daily news and videos

Install App

ಮಗಳ ಮೇಲೆಯೇ ರೇಪ್ ಮಾಡಿದ ಪಾಪಿ ತಂದೆ!

Webdunia
ಮಂಗಳವಾರ, 1 ಮಾರ್ಚ್ 2022 (11:07 IST)
ಬೆಂಗಳೂರು :  ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಅಧೀನ ನ್ಯಾಯಾಲಯ ವಿಧಿಸಿದ್ದ 10 ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.
 
ಶಿಕ್ಷೆ ರದ್ದು ಕೋರಿ ಆರೋಪಿ ತಂದೆ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರ ಪೀಠ ಈ ಆದೇಶ ಮಾಡಿದೆ. ಆರೋಪಿ ತಂದೆ 2014ರ ಸೆ.27ರ ರಾತ್ರಿ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ.

ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರು ಆಧರಿಸಿ ಬೆಂಗಳೂರಿನ ಎಚ್ಎಎಲ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಅಧೀನ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರು. ದಂಡ ವಿಧಿಸಿತ್ತು.

ಈ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದ ಆರೋಪಿ ತಂದೆ, ದೂರು ದಾಖಲಿಸಲು ಎರಡು ದಿನಗಳ ವಿಳಂಬ ಮಾಡಲಾಗಿದೆ. ಇದು ಅಸಾಮಾನ್ಯ ವಿಳಂಬವಾಗಿದೆ. ಮ್ಯಾಜಿಸ್ಪ್ರೇಟ್ ಎದುರು ಸಂತ್ರಸ್ತೆ ನೀಡಿರುವ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ. ಘಟನೆ ವೇಳೆ ಮನೆಯಲ್ಲಿದ್ದ ತಾಯಿ ಹಾಗೂ ಅಜ್ಜಿಯನ್ನು ತನಿಖಾಧಿಕಾರಿಯು ವಿಚಾರಣೆಗೆ ಒಳಪಡಿಸಿಲ್ಲ. ಆದ್ದರಿಂದ ಶಿಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ಮೇಲ್ಮನವಿಯನ್ನು ತಿರಸ್ಕರಿಸಿರುವ ಹೈಕೋರ್ಟ್, ಸಂತ್ರಸ್ತ ಬಾಲಕಿಯ ತಾಯಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದರು. ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ ಒಂಬತ್ತನೇ ದಿನಕ್ಕೆ ನಿಧನರಾಗಿದ್ದಾರೆ. ಅಜ್ಜಿಯೂ ಇಹಲೋಕ ತ್ಯಜಿಸಿದ್ದಾರೆ. ಹೀಗಾಗಿ, ಸಂತ್ರಸ್ತ ಬಾಲಕಿಯ ಚಿಕ್ಕಮ್ಮ ದೂರು ದಾಖಲಿಸಿದ್ದಾರೆ. ಇನ್ನು ದೂರು ದಾಖಲಿಸುವಲ್ಲಿ ಹೆಚ್ಚೇನೂ ವಿಳಂಬವಾಗಿಲ್ಲ.

ಸಂತ್ರಸ್ತೆ ತನ್ನ ತಂದೆಯ ಕೃತ್ಯದ ಬಗ್ಗೆ ಹೇಳಿದ್ದಾಳೆ. ಆಕೆಯ ಹೇಳಿಕೆಯನ್ನು ಚಿಕ್ಕಮ್ಮ, ಚಿಕ್ಕಪ್ಪ, ವೈದ್ಯರು ಮತ್ತು ವೈದ್ಯಕೀಯ ಪುರಾವೆಗಳು ದೃಢಪಡಿಸಿವೆ. ಆದ್ದರಿಂದ ಆರೋಪಿಯ ಕೋರಿಕೆ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟು ಜೈಲು ಶಿಕ್ಷೆ ಕಾಯಂಗೊಳಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments