Webdunia - Bharat's app for daily news and videos

Install App

ಭಾರತ ಬಂದ್ ವೇಳೆ ಅಂಗಡಿ ಮುಚ್ಚದ ವ್ಯಾಪಾರಿ ಮೇಲೆ ಹಲ್ಲೆ

Webdunia
ಶನಿವಾರ, 15 ಸೆಪ್ಟಂಬರ್ 2018 (14:05 IST)
ಭಾರತ ಬಂದ್ ಗೆ ಕರೆ ನೀಡಿದ್ದ ದಿನ ವ್ಯಾಪಾರ ಬಂದ್ ಮಾಡಿಲ್ಲ, ಅಂಗಡಿ ಮುಚ್ಚಿಲ್ಲ ಎನ್ನುವ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಉದ್ಯಮಿ ಹಾಗೂ ಬಿಜೆಪಿಯ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಕೃಷ್ಣಮೂರ್ತಿ ಕೊಠಾರಿ ಸದ್ಯ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾರತ್ ಬಂದ್ ವೇಳೆ ಅಂಗಡಿ ಮುಚ್ಚದಿರುವುದೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸ್ಥಳೀಯ ರಾಜಕೀಯ ಮುಖಂಡರ ಮೇಲೆ ಆರೋಪ ಕೇಳಿಬಂದಿದೆ. ಬಂದ್ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿಬರುತ್ತಿದೆ.

ಸುದೀಪ್ ಶೆಟ್ಟಿ, ಸಂತೋಷ್ ಯಾನೆ ಸಂತು, ಶಶಿ, ಗಿರೀಶ್, ಹರೀಶ್, ಸಂದೇಶ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.
ಮಾರಕಾಸ್ತ್ರ ಹಿಡಿದು ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬಳಿಕ ಹಲ್ಲೆ ನಡೆಸಿದ ವೇಳೆ ಒಂದು ಲಕ್ಷ ಮೌಲ್ಯದ ಚಿನ್ನದ ಸರ, ಹಣ ದರೋಡೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬ್ರಹ್ಮಾವರ ಸಿಪಿಐ ಭೇಟಿ ನೀಡಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments