Publish Date: Tue, 30 Apr 2019 (17:19 IST)
Updated Date: Tue, 30 Apr 2019 (17:25 IST)
ಕುಡಿತದ ಮತ್ತಿನಲ್ಲಿ ಹಾವು ಹಿಡಿಯಲು ಹೋದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಪಟ್ಟಣದ ವಿಶ್ವೇಶ್ವರಪುರದಲ್ಲಿ ಈ ಘಟನೆ ನಡೆದಿದೆ.
ಬಡಾವಣೆಯ ನಿವಾಸಿ ಗೋವಿಂದರಾಜು (35) ಹಾವಿನ ಕಡಿತಕ್ಕೊಳಗಾದವನಾಗಿದ್ದಾನೆ. ಪೇಂಟರ್ ಕೆಲಸ ಮಾಡುವ ಗೋವಿಂದರಾಜು, ರಾತ್ರಿ ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ.
ಆಗ ಹಾವಿನಿಂದ ಕೈಬೆರಳಿಗೆ ಕಚ್ಚಿಸಿಕೊಂಡಿದ್ದಾರೆ. ಪಟ್ಟಣದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.