Webdunia - Bharat's app for daily news and videos

Install App

ಅಳಿಯ - ಮಾವನ ಮಧ್ಯೆ ನೇರ ಹಣಾಹಣಿ ಈ ಕ್ಷೇತ್ರದಲ್ಲಿದೆ…

Webdunia
ಮಂಗಳವಾರ, 19 ಮಾರ್ಚ್ 2019 (11:33 IST)
ಲೋಕಸಭೆ ಚುನಾವಣೆ ಹಿನ್ನಲೆ ಈ ಕ್ಷೇತ್ರದಲ್ಲಿ ಅಳಿಯ ಹಾಗೂ ಮಾವನ ನಡುವ ನೇರ ಪೈಪೋಟಿ ನಡೆಯುವ ಲಕ್ಷಣಗಳು ಗೋಚರಿಸಿವೆ.

ದಾವಣಗೆರೆ ಕ್ಷೇತ್ರದಲ್ಲಿ ಜಿ. ಎಂ. ಸಿದ್ದೇಶ್ವರ್ ಭರ್ಜರಿ ಪ್ರಚಾರ ಶುರುಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ್ ರಿಂದ ಭರ್ಜರಿ ಮಠ ಭೇಟಿ ಆರಂಭಗೊಂಡಿದೆ.

ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಜಿ. ಎಂ. ಸಿದ್ದೇಶ್ವರ್. ಕ್ಷೇತ್ರದಲ್ಲಿರುವ ಹಲವು ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.

ಶ್ರೀ ಕೆಡದಾರೇಶ್ವರ ಶ್ರೀ, ಮಾದಾರ ಚನ್ನಯ್ಯ ಶ್ರೀ, ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಶ್ರೀ, ಭೋವಿ ಮಠದ ಸಿದ್ದರಾಮೇಶ್ವರ ಶ್ರೀ, ಮಡಿವಾಳ ಮಾಚಿದೇವ ಪೀಠದ ಬಸವ ಮಡಿವಾಳ ಮಾಚಿದೇವ ಶ್ರೀ, ಸೇರಿದಂತೆ ಹಲವು ಶ್ರೀಗಳನ್ನು ಭೇಟಿ ಮಾಡಿದ್ದಾರೆ.

ಸಿದ್ದೇಶ್ವರ್ ಗೆ  ಜಗಳೂರು ಶಾಸಕ ಎಸ್. ವಿ. ರಾಮಚಂದ್ರಪ್ಪ, ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಸೇರಿ ಮುಖಂಡರು ಸಾಥ್ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್. ಎಸ್. ಮಲ್ಲಿಕಾರ್ಜುನ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಲ್ಲಿಕಾರ್ಜುನ್ ಹೆಸರು ಖಚಿತ ಎನ್ನುತ್ತಿದ್ದಂತೆ ಸಿದ್ದೇಶ್ವರ್ ಮಠಗಳ ಭೇಟಿ ಶುರುವಿಟ್ಟುಕೊಂಡಿದ್ದಾರೆ. ಈಗಾಗಲೇ ಹ್ಯಾಟ್ರಿಕ್ ಸಾಧಿಸಿರುವ
ಸಿದ್ದೇಶ್ವರ್ ಗೆ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆ ಎದುರಾಗಿದೆ. ಕಾಂಗ್ರೆಸ್ - ಬಿಜೆಪಿ ಪ್ರತಿಷ್ಠೆ ಕಣವಾಗಿರುವ ದಾವಣಗೆರೆ ಕ್ಷೇತ್ರದಲ್ಲಿ ಅಳಿಯ ಮತ್ತು ಮಾವನ ಮಧ್ಯೆ ನೇರ ಹಣಾಹಣಿ ಸಾಧ್ಯತೆ ಇದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments