Webdunia - Bharat's app for daily news and videos

Install App

ಅಳಿಯ - ಮಾವನ ಮಧ್ಯೆ ನೇರ ಹಣಾಹಣಿ ಈ ಕ್ಷೇತ್ರದಲ್ಲಿದೆ…

Webdunia
ಮಂಗಳವಾರ, 19 ಮಾರ್ಚ್ 2019 (11:33 IST)
ಲೋಕಸಭೆ ಚುನಾವಣೆ ಹಿನ್ನಲೆ ಈ ಕ್ಷೇತ್ರದಲ್ಲಿ ಅಳಿಯ ಹಾಗೂ ಮಾವನ ನಡುವ ನೇರ ಪೈಪೋಟಿ ನಡೆಯುವ ಲಕ್ಷಣಗಳು ಗೋಚರಿಸಿವೆ.

ದಾವಣಗೆರೆ ಕ್ಷೇತ್ರದಲ್ಲಿ ಜಿ. ಎಂ. ಸಿದ್ದೇಶ್ವರ್ ಭರ್ಜರಿ ಪ್ರಚಾರ ಶುರುಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ್ ರಿಂದ ಭರ್ಜರಿ ಮಠ ಭೇಟಿ ಆರಂಭಗೊಂಡಿದೆ.

ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಜಿ. ಎಂ. ಸಿದ್ದೇಶ್ವರ್. ಕ್ಷೇತ್ರದಲ್ಲಿರುವ ಹಲವು ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.

ಶ್ರೀ ಕೆಡದಾರೇಶ್ವರ ಶ್ರೀ, ಮಾದಾರ ಚನ್ನಯ್ಯ ಶ್ರೀ, ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಶ್ರೀ, ಭೋವಿ ಮಠದ ಸಿದ್ದರಾಮೇಶ್ವರ ಶ್ರೀ, ಮಡಿವಾಳ ಮಾಚಿದೇವ ಪೀಠದ ಬಸವ ಮಡಿವಾಳ ಮಾಚಿದೇವ ಶ್ರೀ, ಸೇರಿದಂತೆ ಹಲವು ಶ್ರೀಗಳನ್ನು ಭೇಟಿ ಮಾಡಿದ್ದಾರೆ.

ಸಿದ್ದೇಶ್ವರ್ ಗೆ  ಜಗಳೂರು ಶಾಸಕ ಎಸ್. ವಿ. ರಾಮಚಂದ್ರಪ್ಪ, ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಸೇರಿ ಮುಖಂಡರು ಸಾಥ್ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್. ಎಸ್. ಮಲ್ಲಿಕಾರ್ಜುನ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಲ್ಲಿಕಾರ್ಜುನ್ ಹೆಸರು ಖಚಿತ ಎನ್ನುತ್ತಿದ್ದಂತೆ ಸಿದ್ದೇಶ್ವರ್ ಮಠಗಳ ಭೇಟಿ ಶುರುವಿಟ್ಟುಕೊಂಡಿದ್ದಾರೆ. ಈಗಾಗಲೇ ಹ್ಯಾಟ್ರಿಕ್ ಸಾಧಿಸಿರುವ
ಸಿದ್ದೇಶ್ವರ್ ಗೆ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆ ಎದುರಾಗಿದೆ. ಕಾಂಗ್ರೆಸ್ - ಬಿಜೆಪಿ ಪ್ರತಿಷ್ಠೆ ಕಣವಾಗಿರುವ ದಾವಣಗೆರೆ ಕ್ಷೇತ್ರದಲ್ಲಿ ಅಳಿಯ ಮತ್ತು ಮಾವನ ಮಧ್ಯೆ ನೇರ ಹಣಾಹಣಿ ಸಾಧ್ಯತೆ ಇದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments