Webdunia - Bharat's app for daily news and videos

Install App

ಪಾಕಿಸ್ತಾನಿ ನಿವಾಸಿಯ ಆಸ್ತಿ ಖರೀದಿಸಿ ಪೇಚಿಗೆ ಸಿಲುಕಿದ ಸಚಿವರ ಪುತ್ರ!

Webdunia
ಗುರುವಾರ, 9 ಆಗಸ್ಟ್ 2018 (18:45 IST)
ಪಾಕಿಸ್ತಾನ ನಿವಾಸಿಯೊಬ್ಬರ ಆಸ್ತಿಯನ್ನ ಸಚಿವರ ಪುತ್ರನೊಬ್ಬ ಖರೀದಿ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.
ಸಚಿವ ವೆಂಕಟರಾವ್ ನಾಡಗೌಡ ಪುತ್ರ ಪಾಕಿಸ್ತಾನ ನಿವಾಸಿಯೊಬ್ಬರ ಆಸ್ತಿಯನ್ನ ಖರೀದಿ ಮಾಡಿರುವ ವಿಷಯ ಈಗ ವಿವಾದಕ್ಕೆ ಸಿಲುಕಿದೆ. ಬಹುಕೋಟಿ ಬೆಲೆಯ ಜಮೀನನ್ನು ಅಕ್ರಮವಾಗಿ ಕಬಳಿಕೆ ಮಾಡಿದ್ದು, ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದರೂ ಸಹ ರಾಯಚೂರು ಜಿಲ್ಲಾಧಿಕಾರಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಚಿವ ವೆಂಕಟರಾವ್ ನಾಡಗೌಡರ ಪುತ್ರ ಅಭಿಷೇಕ್ ನಾಡಗೌಡ ಸೇರಿದಂತೆ ನಾಲ್ವರು ಪ್ರಭಾವಿಗಳು ರಾಯಚೂರು ಸೀಮಾಂತರದ 84 ಎಕರೆ ಇನಾಂ ಜಮೀನನ್ನ ಲೂಟಿ ಮಾಡಿದ್ದಾರೆ. ರಾಯಚೂರು ಸೀಮಾಂತರದ ಸರ್ವೇ ನಂಬರ್ 1362, 1359/1 ಹಾಗೂ 1356/2ರಲ್ಲಿನ ಖಾಜಿ ಮೊಹಮ್ಮದ್ ಅಬ್ದುಲ್ ರಸೂಲ್ ಸಿದ್ದಿಕಿ ಎಂಬುವವರಿಗೆ ಸೇರಿದ ಒಟ್ಟು 84 ಎಕರೆ ಜಮೀನು ಇತ್ತು. ಅವರು ದೇಶ ವಿಭಜನೆಯ ಬಳಿಕ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದಾರೆ. ಆಗ ಸರ್ಕಾರದ ವಶವಾಗಬೇಕಿದ್ದ ಭೂಮಿಯನ್ನು ಪ್ರಭಾವಿಗಳ ಜೊತೆ ಶಾಮೀಲಾದ ಅಧಿಕಾರಿಗಳು ಖಾಸಗಿ ಆಸ್ತಿಯನ್ನಾಗಿ ಮಾಡಿದ್ದಾರೆ. ಇದ್ರಲ್ಲಿ ಸಚಿವ ವೆಂಕಟರಾವ್ ನಾಡಗೌಡ ಪುತ್ರ ಅಭಿಷೇಕ್ ನಾಡಗೌಡ 21 ಎಕರೆ ಜಮೀನು ಕಬಳಿಕೆ ಮಾಡಿದ್ದಾರೆ. ಉಳಿದಂತೆ ಬಿಜೆಪಿ ಮುಖಂಡ ಕಡಗೋಲ ಆಂಜನೇಯ, ಕಾಂಗ್ರೆಸ್ ಮುಖಂಡರಾದ ಶಿವಾನಂದ ಚುಕ್ಕಿ, ಉದಯಕುಮಾರ್ ಹಾಗೂ ಬಸವರಾಜ ವಕೀಲ್ ಎಂಬುವವರು ಜಮೀನು ಕಬಳಿಕೆ ಮಾಡಿದ್ದಾರೆ.

ಇನ್ನು ಕಬಳಿಕೆ ಆಗಿರುವ ಜಮೀನು ವಶಕ್ಕೆ ಪಡೆಯುವಂತೆ ರಾಯಚೂರು ಜಿಲ್ಲಾಧಿಕಾರಿಗಳಿಗೆ ಕಲಬುರಗಿ ಪ್ರಾದೇಶಿಕ ಆಯುಕ್ತರ ಆದೇಶವಿದ್ದರೂ ಕಿಮ್ಮತ್ತಿಲ್ಲದಂತಾಗಿದೆ. ಆರು ತಿಂಗಳ ಹಿಂದೆಯೇ ಡಿಸಿಗೆ ಆದೇಶ ಬಂದಿದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments