Webdunia - Bharat's app for daily news and videos

Install App

ಹೆತ್ತವರನ್ನೇ ಕೊಲೆ ಮಾಡಿದ ಪಾಪಿ ಮಗ

Webdunia
ಮಂಗಳವಾರ, 2 ಜೂನ್ 2020 (21:43 IST)
ಪಾಪಿ ಮಗನೊಬ್ಬ ತನ್ನ ಹೆತ್ತವರನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ.

ಕಬ್ಬಿಣದ ರಾಡ್​​ನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ರಾಡ್ ​ನಿಂದ ಹೊಡೆದು ಹೆತ್ತವರನ್ನೇ ಮಗ ಹತ್ಯೆಗೈದಿದ್ದಾನೆ.  ರಮೇಶ್ ಮಡಿವಾಳರ (26) ಹೆತ್ತ ತಂದೆ -ತಾಯಿ ಇಬ್ಬರನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ಅಕ್ಕಮ್ಮ (46) ಹಾಗೂ ಗಿರಿಯಪ್ಪ (56) ನತದೃಷ್ಟ ತಂದೆ ತಾಯಿಯರಾಗಿದ್ದಾರೆ. ರಮೇಶ್​​ನ ಪತ್ನಿಯನ್ನು ಮನೆಗೆ ಕರೆತರುವ ವಿಚಾರಕ್ಕೆ  ಮನೆಯಲ್ಲಿ ಕುಟುಂಬ ಕಲಹ ನಡೆದಿದೆ. ಆರೋಪಿ ರಮೇಶ ಹಾಗೂ ತಂದೆ- ತಾಯಿ ನಡುವೆ ಗಲಾಟೆಯಾಗಿದೆ. ಜಗಳ ತಾರಕಕ್ಕೇರಿದ್ದು, ರಾಡ್​​ನಿಂದ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ.

ಕನಕಗಿರಿ  ಸಿಪಿಐ ಸುರೇಶ್ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments