Webdunia - Bharat's app for daily news and videos

Install App

ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಗಲಾಟೆ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:25 IST)
ಬೆಂಗಳೂರು: ಭಾರೀ ಸಂಚಲಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಗಲಾಟೆ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ವಜ್ಜಲ್ ಪುತ್ರ ಪ್ರತಿದೂರು ದಾಖಲಿಸಿದ್ದಾರೆ.
ಇತ್ತ ಪೊಲೀಸರ ತನಿಖೆಯಲ್ಲಿ ಮಾನಪ್ಪ ವಜ್ಜಲ್ ಪುತ್ರನ ಬಗ್ಗೆ ಅನುಮಾನ ಮೂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಕ್ರಮ್ ರೈ ಎಂಬುವರು ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಕ್ರಮ್ ರೈ, ಸೆ.12ರ ರಾತ್ರಿ 10ರ ಸುಮಾರಿಗೆ ಸ್ನೇಹಿತನನ್ನ ಡ್ರಾಪ್ ಮಾಡಲು ಎಂಬಸಿ ಹ್ಯಾಬಿಟೇಟ್ ಅಪಾರ್ಟ್ ಮೆಂಟ್ ಬಳಿ ಬಂದಿದ್ದರು. ಈ ಹಿಂದೆ ಆಂಜಿನಪ್ಪ ವಜ್ಜಲ್ ಎರಡು ಬಾರಿ ಪಾರ್ಕಿಂಗ್ ವಿಚಾರಕ್ಕೆ ವಿಕ್ರಮ್ ರೈ ಜತೆ ಕಿರಿಕ್ ಮಾಡಿಕೊಂಡಿದ್ದರಂತೆ. ಅದೇ ರೀತಿ ಸೆ.12ರಂದು ಕೂಡ ಆಂಜಿನಪ್ಪ ವಜ್ಜಲ್ ತನ್ನ ಆಪ್ತ ಮೌನೀಶ್ ಸೇರಿ 10 ಹುಡುಗರ ಜತೆ ಗಲಾಟೆ ಶುರು ಮಾಡಿದ್ದರಂತೆ. ಬಳಿಕ ಪಂಚ್ ಮಾಡುವ ಆಯುಧದಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಈ ಬಗ್ಗೆ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜಿನಪ್ಪ ವಜ್ಜಲ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತ ಆಂಜಿನಪ್ಪ ವಜ್ಜಲ್ ಪ್ರತಿದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments