Webdunia - Bharat's app for daily news and videos

Install App

ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಗಲಾಟೆ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:25 IST)
ಬೆಂಗಳೂರು: ಭಾರೀ ಸಂಚಲಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಗಲಾಟೆ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ವಜ್ಜಲ್ ಪುತ್ರ ಪ್ರತಿದೂರು ದಾಖಲಿಸಿದ್ದಾರೆ.
ಇತ್ತ ಪೊಲೀಸರ ತನಿಖೆಯಲ್ಲಿ ಮಾನಪ್ಪ ವಜ್ಜಲ್ ಪುತ್ರನ ಬಗ್ಗೆ ಅನುಮಾನ ಮೂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಕ್ರಮ್ ರೈ ಎಂಬುವರು ಹೈಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಕ್ರಮ್ ರೈ, ಸೆ.12ರ ರಾತ್ರಿ 10ರ ಸುಮಾರಿಗೆ ಸ್ನೇಹಿತನನ್ನ ಡ್ರಾಪ್ ಮಾಡಲು ಎಂಬಸಿ ಹ್ಯಾಬಿಟೇಟ್ ಅಪಾರ್ಟ್ ಮೆಂಟ್ ಬಳಿ ಬಂದಿದ್ದರು. ಈ ಹಿಂದೆ ಆಂಜಿನಪ್ಪ ವಜ್ಜಲ್ ಎರಡು ಬಾರಿ ಪಾರ್ಕಿಂಗ್ ವಿಚಾರಕ್ಕೆ ವಿಕ್ರಮ್ ರೈ ಜತೆ ಕಿರಿಕ್ ಮಾಡಿಕೊಂಡಿದ್ದರಂತೆ. ಅದೇ ರೀತಿ ಸೆ.12ರಂದು ಕೂಡ ಆಂಜಿನಪ್ಪ ವಜ್ಜಲ್ ತನ್ನ ಆಪ್ತ ಮೌನೀಶ್ ಸೇರಿ 10 ಹುಡುಗರ ಜತೆ ಗಲಾಟೆ ಶುರು ಮಾಡಿದ್ದರಂತೆ. ಬಳಿಕ ಪಂಚ್ ಮಾಡುವ ಆಯುಧದಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಈ ಬಗ್ಗೆ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜಿನಪ್ಪ ವಜ್ಜಲ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತ ಆಂಜಿನಪ್ಪ ವಜ್ಜಲ್ ಪ್ರತಿದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

ಮುಂದಿನ ಸುದ್ದಿ
Show comments