Webdunia - Bharat's app for daily news and videos

Install App

ರಾಜ್ಯದ ಗಡಿ ಜಿಲ್ಲೆ ಅಕ್ಷರಶಃ ನಡುಗಿದೆ; ಕಾರಣ?

Webdunia
ಬುಧವಾರ, 1 ಮೇ 2019 (18:14 IST)
ರಾಜ್ಯದ ಗಡಿ ಜಿಲ್ಲೆಯೊಂದು ಅಕ್ಷರಶಃ ನಡುಗಿದ್ದು ಅಪಾರ ನಷ್ಟಕ್ಕೆ ಒಳಗಾಗಿದೆ.

ಇತ್ತೀಚೆಗೆ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ಅಕ್ಷರಶಃ ನಲುಗಿದೆ. ಚಾಮರಾಜನಗರ ತಾಲ್ಲೂಕಿನ ಕಿಲಗೆರೆ ಹಾಗೂ ಸುತ್ತ ಮುತ್ತ ಗ್ರಾಮಗಳಲ್ಲಿ ಬಿದ್ದ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ ನೂರಾರು ಎಕರೆ ಬಾಳೆ ಬೆಳೆ ನಷ್ಟವಾಗಿದೆ.

ಗಾಳಿ ಮಳೆಗೆ ಕಿಲಗೆರೆ ಗ್ರಾಮದ ನಾಗಪ್ಪ ಎಂಬುವರು 1.5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ  2000, ಶಶಿರವರ 1000, ಶಿವಸ್ವಾಮಿ ರವರ 1500,  ಮಹಾದೇವಪ್ಪರವರ 1500 ಬಾಳೆಕಟ್ಟೆ ಸಂಪೂರ್ಣ ನೆಲಕ್ಕುರುಳಿದೆ.  ಅಂಗಡಿ ಪುಟ್ಟಮಲ್ಲಪ್ಪ, ಚಿಕ್ಕಸ್ವಾಮಿ, ಚಿಕ್ಕಹೂಳೆಯ ರಾಮಚಂದ್ರ ರವರಿಗೆ ಸೇರಿದ ತೆಂಗು ಹಾಗೂ ಜೋಳದ ಬೆಳೆ ಹಾನಿಗೀಡಾಗಿದೆ. 

ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಹನೂರು, ಕೊಳ್ಳೇಗಾಲ ಸೇರಿದಂತೆ ಇನ್ನಿತರಡೆ ಸುಮಾರು 200 ಕ್ಕೂ ಹೆಚ್ಚು ತೆಂಗಿನಮರಗಳು, 100 ಕ್ಕೂ ಹೆಚ್ಚು ಬೇವಿನಮರಗಳು ನಾಶವಾಗಿವೆ. ಧಾರಕಾರ ಮಳೆಯಿಂದಾಗಿ ಈ ಭಾಗದ ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ರೈತರ ಹೂಲ-ಗದ್ದೆ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments