Webdunia - Bharat's app for daily news and videos

Install App

ಅಬ್ಬಾಬ್ಬ ಎಂಥ ಸೆಕೆ: ರಾಜ್ಯ ರಾಜಧಾನಿಯಲ್ಲೂ ಗರಿಷ್ಠ ಉಷ್ಣಾಂಶ ದಾಖಲು

Sampriya
ಬುಧವಾರ, 2 ಅಕ್ಟೋಬರ್ 2024 (14:25 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಏರಿಕೆಯಾಗಿದೆ. ಬಿಸಿಲ ಬೇಗೆಗೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 32 ಡಿ.ಸೆ. ದಾಖಲಾಗಿದ್ದು, ಇದು ವಾಡಿಕೆಗಿಂತ 3.2 ಡಿ.ಸೆ. ಹೆಚ್ಚಿನ ತಾಪಮಾನವಾಗಿದೆ. ಮಳೆ ಕೊರತೆಯಿಂದ ಬೇಗೆಯ ವಾತಾವರಣ ಉಂಟಾಗಿದ್ದು, ಗಾಳಿಯಲ್ಲೂ ನೀರಿನ ತೇವಾಂಶವಿಲ್ಲದೆ ಕೆಲವೆಡೆ ಬಿಸಿ ಗಾಳಿ ಬೀಸಲಾರಂಭಿಸಿವೆ.

ದಾವಣೆಗೆರೆಯಲ್ಲಿ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಮತ್ತು ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾಗಲಕೋಟೆ ಮತ್ತು ರಾಯಚೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಳೆ ಕೊರತೆ ಪರಿಣಾಮ ಬೇಸಿಗೆಯ ಆರಂಭದ ಸಮಯದಲ್ಲಿನ ಗರಿಷ್ಠ ತಾಪಮಾನದಂತೆಯೇ ಈಗಲೂ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿನ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments