Select Your Language

Notifications

webdunia
webdunia
webdunia
webdunia

ಕಾವೇರಿ ಹೋರಾಟದ ವೇಳೆ ರೈತರ ಮೇಲೆ ಹಾಕಿದ್ದ ಕೇಸು ವಾಪಸ್ ಪಡೆದ ರಾಜ್ಯ ಸರ್ಕಾರ

ಕಾವೇರಿ ಹೋರಾಟದ ವೇಳೆ ರೈತರ ಮೇಲೆ ಹಾಕಿದ್ದ ಕೇಸು ವಾಪಸ್ ಪಡೆದ ರಾಜ್ಯ ಸರ್ಕಾರ
ಮಂಡ್ಯ , ಶನಿವಾರ, 23 ಫೆಬ್ರವರಿ 2019 (11:09 IST)

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ್ದ ಕೇಸುಗಳನ್ನು ವಾಪಸ್ ಪಡೆಯಲು, ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ರೈತರಿಗೆ ಸಿಹಿಸುದ್ದಿ  ನೀಡಿದೆ.


ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ‘ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾವೇರಿ ಹೋರಾಟದ ಸಮಯದಲ್ಲಿ ರೈತರ ಮೇಲೆ ದಾಖಲಾಗಿದ್ದ ಶೇ.95 ರಷ್ಟು ಕೇಸುಗಳನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ’ ಎಂದು ತಿಳಿಸಿದ್ದಾರೆ.


‘ಈಗಾಗಲೇ ರೈತರ ಮೇಲೆ ಹೂಡಿರುವ ಕೇಸುಗಳ ಬಗ್ಗೆ ತಾಲೂಕುವಾರು ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೋರಾಟದ ಸಂದರ್ಭದಲ್ಲಿ ಸರ್ಕಾರದ ಆಸ್ತಿ-ಪಾಸ್ತಿ ನಷ್ಟ ಮಾಡಿರುವ ಕೇಸುಗಳು ವಾಪಸ್ ಪಡೆಯಲಿದ್ದೇವೆ. ಆದರೆ ಖಾಸಗಿ ಆಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಕ್ಯಾಮೆರಾ, ಕಾರುಗಳ ಜಖಂ, ಅಂಗಡಿ, ಮುಗ್ಗಟ್ಟು ಮೇಲೆ ಕಲ್ಲು ತೂರಾಟ, ಪಾಂಡವಪುರ ಜಡ್ಜ್ ಮನೆ ಮೇಲೆ ದಾಳಿ ಸೇರಿದಂತೆ ಖಾಸಗಿಯಾಗಿ ನೀಡಿರುವ ಕೇಸುಗಳು ಕೋರ್ಟ್ ನಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾಗೆ ಮೌಖಿಕ ದೂರು ನೀಡಿದ ಬಿಜೆಪಿ ಸಂಘಟನಾ ಕಾರ್ಯದರ್ಶಿ. ಯಾರ ವಿರುದ್ಧ ಗೊತ್ತಾ?