Webdunia - Bharat's app for daily news and videos

Install App

ಮಹದಾಯಿ ಗೆಜೆಟ್ : ಗೋವಾ ವಿರುದ್ಧ ತೊಡೆತಟ್ಟಿದ ರಾಜ್ಯ ಸರಕಾರ

Webdunia
ಶುಕ್ರವಾರ, 28 ಫೆಬ್ರವರಿ 2020 (15:59 IST)
ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಗೋವಾ ಸುಪ್ರೀಂಕೋರ್ಟ್ ಮೊರೆ ಹೋದರೆ ಅದಕ್ಕೆ ಪ್ರತಿಯಾಗಿ ರಾಜ್ಯ ಸರಕಾರವೂ ಕಾನೂನು ಹೋರಾಟ ನಡೆಸುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.


ಮಹದಾಯಿ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರಕಾರ ಅಧಿಸೂಚನೆ ಪ್ರಕಟ ಮಾಡಿರುವುದು ಮಹದಾಯಿ ಹೋರಾಟಕ್ಕೆ ದೊರಕಿರುವ ಗೆಲುವು ಆಗಿದೆ. 13.2 ಟಿಎಂಸಿ ನೀರು ಹಂಚಿಕೆ ಮಾಡುವ ಮೂಲಕ ರಾಜ್ಯದ ರೈತರಿಗೆ ಜಯ ದೊರಕಿದಂತಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಕಳಸಾ ಬಂಡೂರಿ ನಾಲಾ ಯೋಜನೆಗೆ ಸರಕಾರ ಕ್ರಿಯಾಯೋಜನೆ ರೂಪಿಸಲಿದೆ. ರಾಜ್ಯದ ಪಾಲಿಗೆ ಸಿಕ್ಕಿರುವ ನೀರಿನಲ್ಲಿ ಒಂದು ಹನಿ ನೀರು ಕೂಡ ವ್ಯಯ ಮಾಡದಂತೆ ಬಳಕೆ ಮಾಡಿಕೊಳ್ಳುತ್ತೇವೆ. ಜಲವಿದ್ಯುತ್ ಯೋಜನೆಗೆ ಹಾಗೂ ಕುಡಿಯುವ ನೀರಿಗಾಗಿ ಹಂಚಿಕೆ ಆಗಲಿದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments