Webdunia - Bharat's app for daily news and videos

Install App

ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ– ಡಿವಿಎಸ್ ಟೀಕೆ

Webdunia
ಶನಿವಾರ, 13 ಜನವರಿ 2018 (15:24 IST)
ರಾಜ್ಯದಲ್ಲಿ ಕೊಲೆಗಡುಕರ ಸರ್ಕಾರ ಅಧಿಕಾರದಲ್ಲಿದ್ದು ಹೆಣ್ಣು ಮಕ್ಕಳು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟೀಕಿಸಿದ್ದಾರೆ.
 
ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಎಲ್ಲೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
 
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಮ್ಮ ಸರ್ಕಾರವೇ ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆ ಮಾಡುತ್ತದೆ. ಕಾಂಗ್ರೆಸ್‌ನವರು ನೀರಾವರಿ ಯೋಜನೆ ಹೆಸರಿನಲ್ಲಿ ಕೋಲಾರ ಜಿಲ್ಲೆಯ ಜನರಿಗೆ ವಿಷಪೂರಿತ ನೀರು ಕುಡಿಸಲು ಹೊರಟಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments