Webdunia - Bharat's app for daily news and videos

Install App

ಡಿಕೆಶಿಗೆ ಅಯ್ಯೋಪಾಪ ಎನ್ನುವ ಸ್ಥಿತಿ: ಸಚಿವ ಅಶ್ವತ್ಥನಾರಾಯಣ

Webdunia
ಶನಿವಾರ, 14 ಮೇ 2022 (14:59 IST)
ಬೆಂಗಳೂರು: ನನ್ನನ್ನು ಟಚ್‌ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಈಗ ಅಯ್ಯೋಪಾಪ ಎನ್ನುವ ಸ್ಥಿತಿ ಬಂದಿದೆ. ತನ್ನ ವಿರುದ್ಧ ಮಾತನಾಡೋರನ್ನೆಲ್ಲಾ ನಾಶಮಾಡುತ್ತೇನೆ ಎಂದು ಬಿಲ್ಡಪ್‌ ಕೊಡುತ್ತಿದ್ದ ಅವರೀಗ ತಮ್ಮದೇ ಪಕ್ಷದ ಒಬ್ಬ ಹೆಣ್ಣು ಮಗಳಿಂದ ಮುಜುಗರಕ್ಕೀಡಾಗಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಟಾಂಗ್‌ ನೀಡಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಅವರು ಆ ರೀತಿ ಮಾತನಾಡುವುದಿಲ್ಲ ಎಂದುಕೊಂಡಿದ್ದೇನೆ ಎಂದರು.
 
 ಇದು ಕಾಂಗ್ರೆಸ್‌ನ ಆಂತರಿಕ ವಿಚಾರ. ಆದರೂ ನನ್ನನ್ನು ಇದರಲ್ಲಿ ಸೇರಿಸಿ ಪ್ರಶ್ನಿಸುತ್ತಿರುವುದಕ್ಕೆ ಹೇಳುತ್ತಿದ್ದೇನೆ. ‘ರಮ್ಯಾ ಅವರ ಟ್ವೀಟ್‌ನಿಂದ ಡಿ.ಕೆ.ಶಿವಕುಮಾರ್‌ಗೆ ಸಂಪೂರ್ಣ ಶೇಪ್‌ ಔಟ್‌ ಆಗಿದೆ. ಡಿ.ಕೆ.ಶಿವಕುಮಾರ್‌ ರಾಂಗ್‌ ನಂಬರ್‌ಗೆ ಡಯಲ್‌ ಮಾಡಿದ್ದು ಅವರ ತಪ್ಪು. ನನ್ನನ್ನು ಮುಟ್ಟಿದ ಅವರಿಗೆ ಈಗ ಅಯ್ಯೋ ಪಾಪ ಎನ್ನುವ ಸ್ಥಿತಿ ಬಂದಿದೆ. 
 
ಏನೋ ಆಪಾದನೆ ಮಾಡಿ ದಾರಿ ತಪ್ಪಿಸಬೇಕೆಂದು ಹೊರಟವರಿಗೆ ಅವರ ಪಕ್ಷದವರೇ ಪಾಠ ಕಲಿಸಿದ್ದಾರೆ. ತಮ್ಮದೇ ಪಕ್ಷದ ಹೆಣ್ಣು ಮಗಳ ತೇಜೋವಧೆ ಮಾಡಿದರೆ ಏನಾಗುತ್ತದೆ ಎಂದು ಅವರಿಗೆ ಬಿಸಿ ಮುಟ್ಟಿದೆ. ವ್ಯಕ್ತಿಯ ಸ್ವಾತಂತ್ರ್ಯ ಪರಸ್ಪರ ಸ್ನೇಹ ಸಂಬಂಧ ಪ್ರಶ್ನಿಸುವ ಕೀಳುಮಟ್ಟಕ್ಕೆ ಇಳಿದ ಅವರ ಬಗ್ಗೆ ಯಾರಿಗೂ ಕನಿಕರ ಹುಟ್ಟಲು ಸಾಧ್ಯವಿಲ್ಲ. ರಮ್ಯಾ ಅವರ ಬಗ್ಗೆ ಅವರ ಹೇಳಿಕೆಯಿಂದ ಡಿ.ಕೆ.ಶಿವಕುಮಾರ್‌ ವ್ಯಕ್ತಿತ್ವ ಮನೋಭಾವದ ಎಂತಹದ್ದು ಎಂದು ಇಡೀ ಸಮಾಜಕ್ಕೆ ಅನಾವರಣವಾಗಿದೆ’ ಎಂದರು.
 
ಒಬ್ಬ ಹೆಣ್ಣು ಮಗಳ ತೇಜೋವಧೆ ಮಾಡಿದ ಡಿ.ಕೆ.ಶಿವಕುಮಾರ್‌ ವರ್ತನೆಯಿಂದ ಸಾಕಷ್ಟು ಕಾಂಗ್ರೆಸ್‌ ನಾಯಕರೂ ಬೇಸತ್ತಿದ್ದಾರೆ. ಇಂತಹವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದಾರಲ್ಲ ಎಂದು ಮುಜುಗರ ಅನುಭವಿಸುತ್ತಿದ್ದಾರೆ. ಇದನ್ನು ಕೆಲವರು ಟ್ವೀಟ್‌ ಮಾಡಿ ಅಸಮಾಧಾನವನ್ನೂ ಹೊರಹಾಕಿದ್ದಾರೆ’ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments