Webdunia - Bharat's app for daily news and videos

Install App

ಪ್ರತ್ಯೇಕ ಧರ್ಮದ ಹೋರಾಟ, ಕೂಗು ಇಲ್ಲ: ಎಂ.ಬಿ.ಪಾಟೀಲ್ ಸ್ಪಷ್ಟನೆ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (12:19 IST)
ಬೆಂಗಳೂರು : ಲಿಂಗಾಯಿತ, ವೀರಶೈವ ಯಾವುದೇ ಪ್ರತ್ಯೇಕ ಧರ್ಮದ ಬಗ್ಗೆ ನಾನು ಮಾತನಾಡಿಲ್ಲ, ಅಂತಹ ಯಾವುದೇ ಹೋರಾಟ, ಕೂಗು ಇಲ್ಲ. ನಾವು ಕೇಳಿರುವುದು ಧರ್ಮದ ಮಾನ್ಯತೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಪ್ರತ್ಯೇಕ ಧರ್ಮ ವಿಚಾರವಾಗಿ ಎಂ.ಬಿ.ಪಾಟೀಲ್ ನೀಡಿದ್ದ ಹೇಳಿಕೆ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಇದೀಗ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ಲಿಂಗಾಯಿತ, ವೀರಶೈವ, ಪಂಚಮಸಾಲಿ ಹೀಗೆ ನಮ್ಮಲ್ಲಿಯೂ ಸಾಕಷ್ಟು ಉಪಪಂಗಡಗಳಿವೆ. 99 ಉಪಪಂಗಡಗಳು ಒಟ್ಟಾಗಿ ಸೇರುತ್ತೇವೆ. ಚುನಾವಣೆ ನಂತರ ನಾವೆಲ್ಲರೂ ಒಟ್ಟಾಗಿ ಸೇರಿ ಹೇಗೆ ಮುನ್ನಡೆಯಬೇಕು ಎಂಬುದನ್ನು ಚರ್ಚಿಸುತ್ತೇವೆ ಎಂದರು.
ನಮ್ಮ ಸಮಾಜಕ್ಕೆ ಒಳ್ಳೆಯದಾಗಬೇಕು. ನಮ್ಮ ಸಮುದಾಯದ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಬೇಕು ಎಂಬ ಕಾರಣಕ್ಕೆ 2023ರ ಚುನಾವಣೆ ನಂತರ ಪಂಚಪೀಠದ ಗುರುಗಳು, ವಿರಕ್ತ ಸ್ವಾಮಿಜಿಗಳ ಜೊತೆ ಚರ್ಚಿಸಿ ಎಲ್ಲರೂ ಒಂದು ಗೂಡಿ ಧರ್ಮದ ಮಾನ್ಯತೆಗೆ ಹೋರಾಡುತ್ತೇವೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸೋಣ ಎಂದರು. ಅಲ್ಲದೇ ನಾನು ಪ್ರತ್ಯೇಕ ಧರ್ಮದ ವಿಚಾರ ಎಲ್ಲಿಯೂ ಎತ್ತಲಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಎಲ್ಲರೂ ಒಟ್ಟಿಗೆ ಮುನ್ನಡೆಯೋಣ ಎಂಬುದನ್ನು ತಿಳಿಸಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments