Webdunia - Bharat's app for daily news and videos

Install App

ತೂಗು ಸೇತುವೆ ಭಾರೀ ಪ್ರವಾಹಕ್ಕೆ ನೀರು ಪಾಲು

Webdunia
ಶನಿವಾರ, 10 ಆಗಸ್ಟ್ 2019 (17:32 IST)
ಪ್ರವಾಹದ ನೀರು ಹಾಗೂ ಮಳೆ ನೀರಿನ ರಭಸಕ್ಕೆ ತೂಗುಸೇತುವೆ ನೀರುಪಾಲಾಗಿದೆ.

ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವಂತೆಯೇ ನದಿ ತೀರದ ಪ್ರದೇಶಗಳು ಮುಳುಗಡೆಗೊಳ್ಳುತ್ತಿವೆ. ನೀರಿನ ರಭಸಕ್ಕೆ ವಳಾಲು ತೂಗುಸೇತುವೆ ನೀರು ಪಾಲಾಗಿದೆ.

ತೂಗು ಸೇತುವೆಯ ಮೇಲೆ ನೀರು ಬಂದಿದ್ದು, ಮರಗಳು ಬಿದ್ದು ಹಾನಿ ಸಂಭವಿಸಿತ್ತು. ರಾತ್ರಿಯಾಗುತ್ತಿದ್ದಂತೆ ಸೇತುವೆಯ ಮಧ್ಯ ಭಾಗ ಮುರಿದು ಬಿದ್ದಿದ್ದು, ನೀರುಪಾಲಾಗಿದೆ. ನೇತ್ರಾವತಿ ನದಿ ಬಂಟ್ವಾಳ್ ದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಣಿಹಳ್ಳ  -ಬಂಟ್ವಾಳ್ ಮುಂತಾದ ಕಡೆಗಳಲ್ಲಿ ನದಿ ನೀರು ರಸ್ತೆ ಗೆ ಬಂದಿರುವ ಕಾರಣ ಬಂಟ್ವಾಳ್ ಧರ್ಮಸ್ಥಳ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಉಪ್ಪಿನಂಗಡಿ -ಮಾಣಿ ರಸ್ತೆಯಲ್ಲೂ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆ ತೀವ್ರಗೊಂಡಿರುವುದರಿಂದ  ಶಾಸಕ ರಾಜೇಶ್ ನಾಯ್ಕ್  ಮದ್ಯೆ ರಾತ್ರಿಯಲ್ಲೂ  ಅಪಾಯಕ್ಕೆ  ಸಿಲುಕಿದ  ಜನರನ್ನು ಸ್ಥಳಾಂತರ ಮಾಡುವ ಕಾರ್ಯದಲ್ಲಿ  ತೊಡಗಿದ್ದರು. ಬಂಟ್ವಾಳ್ ತಾಲೂಕಿನ ವಿವಿಧೆಡೆ ನೂರಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments