Select Your Language

Notifications

webdunia
webdunia
webdunia
webdunia

ಅನುಮಾನಕ್ಕೆ ಕಾರಣವಾಯ್ತು ಸುಮಲತಾ ಅಂಬರೀಶ್ ಕೃತಜ್ಞತಾ ಸಮಾವೇಶದ ಫ್ಲೆಕ್ಸ್. ಯಾಕೆ ಗೊತ್ತಾ?

ಅನುಮಾನಕ್ಕೆ ಕಾರಣವಾಯ್ತು ಸುಮಲತಾ ಅಂಬರೀಶ್ ಕೃತಜ್ಞತಾ ಸಮಾವೇಶದ ಫ್ಲೆಕ್ಸ್. ಯಾಕೆ ಗೊತ್ತಾ?
ಮಂಡ್ಯ , ಬುಧವಾರ, 29 ಮೇ 2019 (11:57 IST)
ಮಂಡ್ಯ : ಇತ್ತೀಚೆಗೆ ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಗೆ ಅಭಿನಂದನೆ ಸಲ್ಲಿಸುವ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ಸಿಗರ ಫೋಟೋಗಳು ರಾರಾಜಿಸುತ್ತಿತ್ತು. ಇದೀಗ ಮತ್ತೆ ಸುಮಲತಾ ಅಂಬರೀಶ್ ಕೃತಜ್ಞತಾ ಸಮಾವೇಶದ ಫ್ಲೆಕ್ಸ್ ನಲ್ಲಿಯೂ ಕೂಡ ಕಾಂಗ್ರೆಸ್ ಮುಖಂಡರ ಫೋಟೋಗಳು ರಾರಾಜಿಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.




ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಇಂದು ಸ್ವಾಭಿಮಾನದ ಸಮಾವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಮಾವೇಶದ ಕುರಿತು ಹಾಕಲಾಗಿದ್ದ ಫ್ಲೆಕ್ಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಲುವರಾಯಸ್ವಾಮಿ, ಜಮೀರ್ ಅಹಮದ್, ನರೇಂದ್ರಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಫೋಟೋಗಳು ಇವೆ.


ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸುಮಲತಾ ಅವರಿಗೆ ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಪರೋಕ್ಷವಾಗಿ ಬೆಂಬಲ ನೀಡಿದ್ದರು ಎಂಬ ಚರ್ಚೆ ಆರಂಭದಿಂದಲೂ ಕೇಳಿ ಬಂದಿತ್ತು. ಇದೀಗ ಸುಮಲತಾ ಅಂಬರೀಶ್ ಕೃತಜ್ಞತಾ ಸಮಾವೇಶದ ಫ್ಲೆಕ್ಸ್ ನಲ್ಲಿ ಕಾಂಗ್ರೆಸ್ ಮುಖಂಡರ ಫೋಟೋಗಳು ರಾರಾಜಿಸುತ್ತಿರುವುದು ಅನುಮಾನಕ್ಕೆ ಮತ್ತಷ್ಟು ಎಡೆಮಾಡಿಕೊಟ್ಟಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಹುದ್ದೆ ತ್ಯಜಿಸಿದರೆ ಅವರ ಹಿಂದೆಯೇ ಹೋಗಲು ಈ ನಾಯಕನೂ ರೆಡಿ!