Webdunia - Bharat's app for daily news and videos

Install App

ಕೊಲೆಗಡುಕರು ಅಂದರ್

Webdunia
ಶುಕ್ರವಾರ, 15 ಏಪ್ರಿಲ್ 2022 (17:48 IST)
ನಿವೃತ್ತ ಯೋಧ ಸುರೇಶ್ @ ಜೂಡ್ ಕೊಲೆ ಪ್ರಕರಣ ಸಂಬಂಧ ಘಟನೆ ನಡೆದ 24 ಗಂಟೆಯಲ್ಲೇ ಕೊಲೆಯ ಪ್ರಮುಖ ಆರೋಪಿ ಬಾಬು ನಾಯಕ್ ಸೇರಿ ಐವರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್​​​​ 13 ರಂದು  ಸುರೇಶ್ ಕೈಕಾಲು ಕಟ್ಟಿ ತಲೆಗೆ ಕಬ್ಬಿಣದ ರಾಡ್​​​​ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಕೊಲೆಯಾದ ಸುರೇಶ್ ಹೆಂಡತಿ-ಮಕ್ಕಳಿಂದ ದೂರಾಗಿ ಹಲಸೂರಿನ ಗೌತಮ್ ಕಾಲೋನಿ ಮನೆಯಲ್ಲಿ ವಾಸವಿದ್ದ. ಈ ವೇಳೆ ಬಾಬು ನಾಯಕ ಸುರೇಶನನ್ನ ಪರಿಚಯ ಮಾಡಿಕೊಂಡಿದ್ದ. ಸುರೇಶನ ಬಳಿ ಬ್ಯಾಂಕ್ ಬ್ಯಾಲೆನ್ಸ್ ಹಾಗೂ ಸ್ವಂತ ಮನೆ ಇರೋ ಮಾಹಿತಿಯನ್ನ ಬಾಬು ತಿಳಿದುಕೊಂಡು ಸುರೇಶನನ್ನ ಹೆದರಿಸಿ ಹಣ ಸುಲಿಗೆ ಮಾಡಲು  ಪ್ಲ್ಯಾನ್ ರೂಪಿಸಿದ್ದ. ಪ್ಲ್ಯಾನ್​​​​​ನಂತೆ ಆಂಧ್ರದಲ್ಲಿದ್ದ ನಾಲ್ವರು ಸ್ನೇಹಿತರನ್ನ ಬಾಬು ಕರೆಸಿಕೊಂಡು ಸುರೇಶ್ ಹತ್ಯೆ ಮಾಡಿದ್ದಾರೆ. ಇನ್ನು ಪೊಲೀಸರಿಗೆ, ಶ್ವಾನ‌ದಳಕ್ಕೆ ಆರೋಪಿಗಳ ಜಾಡು ಸಿಗಬಾರದೆಂದು ಸುರೇಶನ ಶವದ ಸುತ್ತಮುತ್ತು ಖಾರದಪುಡಿ ಹಾಕಿ ಪರಾರಿಯಾಗಿದ್ದರು. ಹೀಗೆ ಸಿನಿಮೀಯ ರೀತಿ ಕೊಲೆಗೈದ ಬಾಬು ಆಂಡ್ ಟೀಂ ಇದೀಗ ಅಂದರ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments