Webdunia - Bharat's app for daily news and videos

Install App

ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ ಸಾರಿಗೆ ನೌಕರರ ಒಕ್ಕೂಟ

Webdunia
ಶನಿವಾರ, 4 ಫೆಬ್ರವರಿ 2023 (10:23 IST)
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಸಾರಿಗೆ ಸಿಬ್ಬಂದಿ ಮತ್ತು ಸರ್ಕಾರದ ನಡುವಿನ ತಿಕ್ಕಾಟ ಮುಗಿಯುವ ಹಾಗೆ ಕಾಣುತ್ತಿಲ್ಲ.

ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿರುವ ಸಾರಿಗೆ ನೌಕರರು ಸಾರಿಗೆ ಇಲಾಖೆ ಮುಂದೆ ಮಾಡು ಇಲ್ಲವೇ ಮಡಿ ಆಯ್ಕೆ ಇಟ್ಟಿದ್ದಾರೆ.

ಚುನಾವಣಾ ಹೊತ್ತಲ್ಲೇ ಮತ್ತೆ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಕಳೆದ ತಿಂಗಳಷ್ಟೇ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಸಾರಿಗೆ ನೌಕರರ ಒಕ್ಕೂಟ, ಈಗ ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಕೆಗೆ ಡೆಡ್ ಲೈನ್ ನೀಡಿದೆ. 

ಫೆಬ್ರವರಿ ಅಂತ್ಯದೊಳಗೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ಮತ್ತೊಮ್ಮೆ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಮುಂದೆ ನೌಕರರ ಒಕ್ಕೂಟ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ.

ಒಂದು ತಮ್ಮ ಬೇಡಿಕೆಗಳಿಗೆ ಒಪ್ಪಬೇಕು. ಎರಡನೇಯದು ಸರ್ಕಾರ ಬೇಡಿಕೆಗೆ ಒಪ್ಪದಿದ್ದರೆ ಪ್ರತಿಭಟನೆಯನ್ನು ಎದುರಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ತಿಂಗಳು ಆರಂಭವಾಗುವ ವಿಧಾನಸಭಾ ಕಲಾಪದಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ತೀರ್ಮಾನ ಪ್ರಕಟಿಸುವಂತೆ ಆಗ್ರಹ ಮಾಡಿದ್ದು, ಈ ತಿಂಗಳೇ ಸರ್ಕಾರಕ್ಕೆ ಡೆಡ್ಲೈನ್ ಅಂತಾ ಎಚ್ಚರಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments