Webdunia - Bharat's app for daily news and videos

Install App

ಭೂಗತ ಪಾತಕಿ ಬನ್ನಂಜೆ ರಾಜಾ ಜುಲೈ 8ರಂದು ಉಡುಪಿಗೆ

Webdunia
ಶುಕ್ರವಾರ, 6 ಜುಲೈ 2018 (16:22 IST)
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜಾ ಜುಲೈ 8ರಂದು ಉಡುಪಿಗೆ ಆಗಮಿಸಲಿದ್ದಾನೆ. ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ತಾಯಿಯನ್ನು ಭೇಟಿಯಾಗಲು ಬನ್ನಂಜೆ ರಾಜಾ ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದ. 

ಆತನಿಗೆ ನ್ಯಾಯಾಧೀಶರು ವಿಶೇಷ ಅನುಮತಿ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದಿರುವ ಬನ್ನಂಜೆ ರಾಜಾ ಜುಲೈ 8ರಂದು ಉಡುಪಿಯ ಮಲ್ಪೆಗೆ ಬರಲಿದ್ದಾನೆ ಎಂದು ತಿಳಿದು ಬಂದಿದೆ. ಬನ್ನಂಜೆ ರಾಜಾ ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಹೆಚ್ಚುವರಿ ಭದ್ರತೆಯನ್ನು ಕೂಡಾ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಭೂಗತ ಪಾತಕಿ ಬನ್ನಂಜೆ ರಾಜಾನನ್ನು 2015ರ ಫೆಬ್ರವರಿ 10ರಂದು ಸೌತ್ ಆಫ್ರಿಕಾದ ಮೊರೆಕ್ಕಾದಲ್ಲಿ ಬಂಧಿಸಲಾಗಿತ್ತು. ಸುಮಾರು 15 ಪ್ರಕರಣಗಳನ್ನು ಉಲ್ಲೇಖಿಸಿ ಮೊರೆಕ್ಕೋದಿಂದ ಬಂಧಿಸಿ ಉಡುಪಿಗೆ ಕರೆ ತರಲಾಗಿತ್ತು. ಸದ್ಯ ಹಿಂಡಲಗಾ ಜೈಲಿನಲ್ಲಿರುವ ಬನ್ನಂಜೆ ರಾಜಾನ ವಿಚಾರಣೆ ವಿಡೀಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments