Webdunia - Bharat's app for daily news and videos

Install App

ರಾಜಧಾನಿಯಲ್ಲಿ ರೌಡಿ ಗ್ಯಾಂಗ್‌ಗಳ ಅಂದರ್

Webdunia
ಶನಿವಾರ, 23 ಅಕ್ಟೋಬರ್ 2021 (20:36 IST)
ಬೆಂಗಳೂರು: ರಾಜಧಾನಿಯಲ್ಲಿ ಎರಡು ರೌಡಿ ಗ್ಯಾಂಗ್‌ಗಳನ್ನು ಸಿಸಿಬಿ ಪೊಲೀಸರು ಅಂದರ್ ಮಾಡಿದ್ದಾರೆ.    
 
ರೌಡಿಸಂ ರಾಬರಿ ಮಾಡುತ್ತಿದ್ದ ಆರೋಪದ ಮೇಲೆ ಜೆ.ಜೆ.ನಗರದ ರೌಡಿಶೀಟರ್ ಇಮ್ರಾನ್ ಗ್ಯಾಂಗ್ ಮತ್ತು ವಿದ್ಯಾರಣ್ಯಪುರದ ರೌಡಿ ನಿಶಾಂತ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.
 
ಇಮ್ರಾನ್ ಗ್ಯಾಂಗ್‌ನ ನವಾಜ್, ಇರ್ಷಾದ್, ಇಮ್ರಾನ್ ಪಾಷಾ, ಮಹಮದ್ ಅಫ್ತಾಬ್ ಬಂಧನಕ್ಕೊಳಗಾಗಿದ್ದು. ಆರೋಪಿಗಳು ಒಂಟಿಯಾಗಿ ತಿರುಗಾಡುವವರನ್ನು ಲಾಂಗ್ ಇಟ್ಟು ಹೆದರಿಸಿ ದರೋಡೆ ಮಾಡುತ್ತಿದ್ದರು. ಇಮಾನ್ 2020ರಲ್ಲಿ ನಡೆದಿದ್ದ ಪಾದರಾಯನಪುರ ಗಲಭೆಯ ಪ್ರಮುಖ ಅರೋಪಿಯಾಗಿದ್ದ. ಗಲಭೆ ಬಳಿಕ ತಲೆಮರಿಸಿಕೊಂಡಿದ್ದ. ನಂತರ ಅರೆಸ್ಟ್ ಮಾಡಲಾಗಿತ್ತು. ಆದರೆ ಬೇಲ್ ಪಡೆದು ಹೊರ ಬಂದು ಮತ್ತೆ ರೌಡಿಸಂ ಮಾಡುತ್ತಿದ್ದ ಎಂದು ಕೇಂದ್ರ  ಅಪರಾಧ ಪತ್ತೆ ದಳದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. 
 
ವಿದ್ಯಾರಣ್ಯಪುರದ ರೌಡಿ ನಿಶಾಂತ್ ಗ್ಯಾಂಗ್ ಕಟ್ಟಿದ್ದ. ಏರಿಯಾದಲ್ಲಿನ ಸಿವಿಲ್ ವಿಚಾರಗಳಿಗೆ ಕೈಹಾಕಿ, ಸೆಟಲ್ ಮೆಂಟ್ ಮಾಡುವ ಕೆಲಸ ಮಾಡುತ್ತಿದ್ದ. ನಿಶಾಂತ್ ಗ್ಯಾಂಗ್ ಸಹಚರರಾದ ಶರತ್, ಅಜಯ್, ಯತೀಶ್ ಎನ್ನುವವರನ್ನು ಸದ್ಯ ಬಂಧಿಸಲಾಗಿದೆ. ಸಿಸಿಬಿಯ ಒಸಿಡಬ್ಲೂ ವಿಭಾಗದ  ಅಧಿಕಾರಿಗಳು ಎರಡು ರೌಡಿಗ್ಯಾಂಗ್‌ನ ಅರೆಸ್ಟ್ ಮಾಡಿದ್ದಾರೆ ಎಂದು ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments