Webdunia - Bharat's app for daily news and videos

Install App

ಹೊಡಿರಿ, ಬಡಿರಿ ಎಂದ ಕಾಂಗ್ರೆಸ್ ಮಾಜಿ ಸಚಿವ

Webdunia
ಗುರುವಾರ, 20 ಸೆಪ್ಟಂಬರ್ 2018 (15:54 IST)
ಕಾಂಗ್ರೆಸ್​ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
 ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಅಡಕಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಶರಣ ಪ್ರಕಾಶ್​ ಪಾಟೀಲ್​ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಡಿಯೋವೊಂದು ಸದ್ಯ ವೈರಲ್​ ಆಗಿದೆ. ವಿಧಾನಸಭೆ ಚುನಾವಣೆ ವೇಳೆ ಎರಡು ಗುಂಪುಗಳ ನಡುವೆ ಗ್ರಾಮದಲ್ಲಿ  ಘರ್ಷಣೆಯಾಗಿತ್ತು. ಪಾಟೀಲ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು. ಅದರ ಕುರಿತು ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವರು, ಅವರು ಹತ್ತು ಹೊಡೆದ್ರೆ, ನೀವು ಒಂದಾದ್ರು ಹೊಡಿರಿ. ಸುಮ್ಮನೆ ಇರೋದು ಗಂಡಸತನ ಅಲ್ಲ. ಈಗ ಏನಾದರೂ ಆದ್ರೆ ನಾನು ನೋಡಿಕೊಳ್ಳುತ್ತೇನೆ ನೀವು ಹೊಡೀರಿ.  ಹೊಡೀರಿ  ನೀವು ಬಡಿರಿ ಅಂತ ನಾನು ಬಹಿರಂಗವಾಗಿ ಹೇಳೋಕೆ ಆಗಲ್ಲ ಎಂದಿದ್ದಾರೆ.

ನಾನು ಮನಸ್ಸು ಮಾಡಿದ್ರೆ ಮಂತ್ರಿಯಾಗಿದ್ದಾಗ ಅವರನ್ನೆಲ್ಲಾ ಒದ್ದು ಒಳಗೆ ಹಾಕಿಸಬಹುದಿತ್ತು. ಆದ್ರೆ ನಾನು ಹಾಗೆ ಮಾಡಿಲ್ಲ. ಹಾಗೆ ಮಾಡಿದ್ರೆ ಅಧಿಕಾರ ದುರುಪಯೋಗ ಮಾಡಿಕೊಂಡು ದೌರ್ಜನ್ಯ ಮಾಡ್ತಾರೆ ಅಂತಿದ್ರು. ಈಗ ನಾನು ಅಧಿಕಾರದಲ್ಲಿಲ್ಲ. ನಿಮಗೆ ಏನಾದರೂ ಆದರೆ ಸುಮ್ಮನಿರೋದಿಲ್ಲ ಎಂದು ಮಾತನಾಡಿರೋ ವಿಡಿಯೋ ವೈರಲ್​ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments