Webdunia - Bharat's app for daily news and videos

Install App

ಇಷ್ಟುದಿನ ಖಾಸಗಿ ಹೋಟೆಲ್ - ಸಿಎಂರಿಂದ ಈಗ ಗ್ರಾಮ ವಾಸ್ತವ್ಯ: ವ್ಯಂಗ್ಯ

Webdunia
ಮಂಗಳವಾರ, 11 ಜೂನ್ 2019 (14:46 IST)
ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿದ್ದ ಧರಣಿ ಮುಂದೂಡಿಕೆಯಾಗಿದ್ದು, ಜೂನ್ 13 ರಂದು ಧರಣಿ ನಡೆಸಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದು, ಮೈತ್ರಿ ಸರ್ಕಾರದ ವೈಫಲ್ಯಗಳು ಮತ್ತು ಜಿಂದಾಲ್ ಪ್ರಕರಣ ವಿರೋಧಿಸಿ ಬಿಜೆಪಿ ಯುವಮೋರ್ಚಾ ಜೂನ್ 11 ರ ಬದಲಾಗಿ ಜೂನ್ 13 ರಂದು ಧರಣಿ ನಡೆಸಲು ನಿರ್ಧಾರ ಮಾಡಿದೆ ಎಂದರು.

ಲೋಕಸಭೆ ಚುನಾವಣೆ ಬಳಿಕವಾದ್ರೂ ಸಿಎಂ ಕುಮಾರಸ್ವಾಮಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಾರೆ ಎನ್ನುವ ಭರವಸೆ ಇತ್ತು. ಕುಮಾರಸ್ವಾಮಿ ಕೇವಲ‌ ಸಿಎಂ ಸ್ಥಾನ ಉಳಿಸಿಕೊಳ್ಳಲು ಹೊರಟಿದ್ದಾರೆ. ಕುಮಾರಸ್ವಾಮಿ ನೀಡಿದ ಪ್ರಣಾಳಿಕೆ ಭರವಸೆ ಈಡೇರಿಸುತ್ತಿಲ್ಲ. ಮಾಧ್ಯಮ ಸ್ನೇಹಿತರು ಸಿಎಂ ರನ್ನ ಪ್ರಶ್ನಿಸಿದ್ರೆ ಜೈಲಿಗೆ ಹಾಕುವ ಪ್ರವೃತ್ತಿ ನಡೆಯುತ್ತಿದೆ ಎಂದರು.

ಸ್ವತಃ ಚುನಾವಣೆಯಲ್ಲಿ ಪುತ್ರ ಸೋತ್ರೆ ಸಹಜವಾಗಿ ಮನಸ್ಸಿಗೆ ನೋವಾಗುತ್ತೆ‌‌. ಆದ್ರೆ ಸಿಎಂ ಮತ್ತು ಮಂತ್ರಿಗಳು ಜನರ ಸಮಸ್ಯೆಯತ್ತ ಗಮನಕೊಡ್ತಿಲ್ಲ. ವಿಧಾನಸೌಧ ಸಂಪೂರ್ಣ ನಿದ್ರಾವಸ್ಥೆಯಲ್ಲಿದೆ. ಇಷ್ಟು ದಿನ ಖಾಸಗಿ ಹೋಟೆಲ್ ನಲ್ಲಿದ್ದು ಇವಾಗ ಗ್ರಾಮ ವಾಸ್ತವ್ಯ ಅಂತ ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments