ಪುಂಡರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Webdunia
ಗುರುವಾರ, 24 ಆಗಸ್ಟ್ 2023 (16:50 IST)
ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಮುಂದಾಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಹಲ್ಲೆ ಮಾಡಲು ಮಾರಕಾಸ್ತ್ರಗಳ ಸಹಿತ ಬಂದ ಪುಂಡರನ್ನ ಸ್ವತಃ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಹೊಸಪಾಳ್ಯ ಗ್ರಾಮದ ಬಳಿ ಈ ಘಟನೆ ನಡೆದಿದೆ. ತುಮಕೂರು ಮೂಲದ ಪುಂಡರ ಗುಂಪು ಹೊಸಪಾಳ್ಯ ಯುವಕರಿಗೆ ಥಳಿಸಲು ಸ್ಕೆಚ್ ಹಾಕಿತ್ತು. ಮಾರಕಾಸ್ತ್ರಗಳ ಸಹಿತ ಲಾಂಗು, ಮಚ್ಚು ಹಿಡಿದು ಹಲ್ಲೆ ನಡೆಸಲು ಹೊಂಚು ಹಾಕ್ತಿದ್ದರು. ಇದನ್ನ ಗಮನಿಸಿ ಪುಂಡರನ್ನ ಮಾರಕಾಸ್ತ್ರಗಳ ಸಹಿತ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಹೊಸಪಾಳ್ಯ ಗ್ರಾಮಸ್ಥರು ಆ ಪುಂಡರನ್ನು ಚಿಕ್ಕನಾಯಕನಹಳ್ಳಿ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. ಹಲ್ಲೆ‌ ಮಾಡಲು ಯತ್ನಿಸಿದ 6 ಜನ ಪುಂಡರನ್ನ ಚಿಕ್ಕನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುಂಡರ ಬಳಿಯಿದ್ದ ಮಚ್ಚು, ಲಾಂಗು, ಸೇರಿದಂತೆ ಹಲವು ಮಾರಕಾಸ್ತ್ರಗಳು ಪೊಲೀಸರ ವಶವಾಗಿವೆ. ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಹುಡುಗಿ ವಿಚಾರಕ್ಕೆ ಹೊಸಪಾಳ್ಯ ಯುವಕರಿಗೆ ಹಲ್ಲೆ ನಡೆಸಲು ಬಂದಿದ್ದರು ಎನ್ನಲಾಗ್ತಿದೆ. ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಒಡಿಶಾ: ಬಿಜೆಪಿ ಮುಖಂಡ ಪಿತಾಬಾಷ್ ಪಾಂಡಾ ಬರ್ಹಾಂಪುರದಲ್ಲಿ ಗುಂಡಿಕ್ಕಿ ಹತ್ಯೆ

ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments