Webdunia - Bharat's app for daily news and videos

Install App

ಲಂಚಕ್ಕಾಗಿ ಪೀಡಿಸಿದವರನ್ನು ಎತ್ತಿ ಹೊರಗೆ ಬಿಸಾಕಿದ ಗ್ರಾಮಸ್ಥರು

Webdunia
ಗುರುವಾರ, 11 ಮೇ 2017 (14:05 IST)
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಗ್ರಾಮಸ್ಥರು ಭ್ರಷ್ಟ, ಲಂಚಬಾಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
 
ಪ್ರತಿನಿತ್ಯ ಗ್ರಾಮಸ್ಥರಿಂದ ಲಂಚಕ್ಕಾಗಿ ಪೀಡಿಸುತ್ತಿದ್ದ ಅಧಿಕಾರಿ ಮತ್ತು ಇತರ ಸಿಬ್ಬಂದಿಗಳನ್ನು ಗ್ರಾಮಸ್ಥರು ಎತ್ತಿ ಹೊರಗೆ ಬಿಸಾಕಿದ್ದಾರೆ. ಕಚೇರಿ ಸಿಬ್ಬಂದಿಗಳ ಲಂಚಬಾಕತನದಿಂದ ಬೇಸತ್ತ ಗ್ರಾಮಸ್ಥರು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
 
ಗ್ರಾಮಸ್ಥರು ಅಧಿಕಾರಿಗಳನ್ನು ಕಚೇರಿಯಿಂದ ಎತ್ತಿ ಹೊರಗೆ ಬಿಸಾಕಿದ ನಂತರ ಕಚೇರಿಗೆ ಬಿಗ ಜಡಿದಿದ್ದರಿಂದ ಕೆಲ ಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಚಿಕ್ಕೊಡಿ ತಾಲೂಕಿನ ತಹಶೀಲ್ದಾರ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವಲ್ಲಿ ನಿರತರಾಗಿದ್ದಾರೆ. 
 
ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಗ್ರಾಮದಲ್ಲಿ ಭಾರಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments