Webdunia - Bharat's app for daily news and videos

Install App

ವಾಮಾಚಾರ ಆರೋಪ: ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

Webdunia
ಭಾನುವಾರ, 16 ಸೆಪ್ಟಂಬರ್ 2018 (15:39 IST)
ಮುಳ್ಳುಹಂದಿಯ ಮುಳ್ಳನ್ನು ಬೇರೆಯವರ ಮನೆಯಲ್ಲಿ ಇಟ್ಟು ಜಗಳವಾಡೋ ಹಾಗೆ ಮಾಡ್ತಿದ್ದ ವಾಮಾಚಾರಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಗದಗ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯ ಮುಳಗುಂದದ ಸಿದ್ದೇಶ್ವರ ನಗರದಲ್ಲಿ ಈ ಘಟನೆ ನಡೆದಿದ್ದು, ವಾಮಾಚಾರಿಯನ್ನು  ಲಕ್ಷ್ಮಣ ಭಂಗಿ ಎಂದು ಗುರುತಿಸಲಾಗಿದೆ. ಗ್ರಾಮದ ಮಾಂತೇಶ್ ಎನ್ನೋರ ಮನೆಯ ಹೊರಗೆ ಮುಳ್ಳುಹಂದಿಯ ಮುಳ್ಳನ್ನು ಇಡುವಾಗ ವಾಮಾಚಾರಿ ಸಿಕ್ಕಿಬಿದ್ದಿದ್ದಾನೆ. ಮುಳ್ಳನ್ನು ಈ ರೀತಿ ಇಟ್ಟರೆ ಮನೆಯಲ್ಲಿ ಜಗಳಗಳಾಗಿ ಮನೆ ಬೇರೆಯಾಗುತ್ತದೆ ಎನ್ನುವ ನಂಬಿಕೆಯಿದೆ. ಈ ಹಿಂದೆಯೂ ಸಹ ಲಕ್ಷ್ಮಣ ಇದೇ ಬಗೆಯಾಗಿ‌ ಬೇರೆ ಬೇರೆ ವಾಮಾಚಾರ ಮಾಡುವಾಗ ಸಿಕ್ಕಿಬಿದ್ದಿದ್ದು, ಆಗ ಗ್ರಾಮಸ್ಥರು ಈತನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗುತ್ತಿದೆ.  

ಬೆಳಗಿನ ಜಾವ ಈ ಘಟನೆ ನಡೆದಿದ್ದು, ಲಕ್ಷ್ಮಣ ಭಂಗಿಯನ್ನು ಹಿಡಿದ ಗ್ರಾಮಸ್ಥರು ಮುಳಗುಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಳಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments