Webdunia - Bharat's app for daily news and videos

Install App

ಮಣ್ಣಲ್ಲಿ ಮಣ್ಣಾದ ವೀರ ಮರಣ ಹೊಂದಿದ ಯೋಧ

Webdunia
ಗುರುವಾರ, 29 ನವೆಂಬರ್ 2018 (16:27 IST)
ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಹೋರಾಡಿ ವೀರ ಮರಣ ಹೊಂದಿದ ವೀರಯೋಧ ಪ್ರಕಾಶ ಜಾಧವ ಮಣ್ಣಲ್ಲಿ ಮಣ್ಣಾಗಿದ್ದಾರೆ. 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೂಧಿಹಾಳ ಗ್ರಾಮದಲ್ಲಿ ವೀರ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನೆರವೇರಿತು.

ಯೋಧ ಪ್ರಕಾಶ ಸಾವಿನಿಂದಾಗಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದಲ್ಲಿ ಯೋಧನ ಪಾರ್ಥಿವ ಶರಿರದ ಮೆರವಣಿಗೆ ನಡೆಸಲಾಯಿತು. ಯೋಧನ ಅಂತ್ಯಕ್ರಿಯೆಗೆ ಸುತ್ತಲು ಹತ್ತಾರು ಗ್ರಾಮದ ಜನ ಸಾಗರವೇ ಹರಿದು ಬಂದಿದ್ದು ಅಮರ ರಹೆ, ಅಮರ ರಹೆ, ಪ್ರಕಾಶ ಜಾಧವ್ ಅಮರ ರಹೆ ,ಎಂಬ ಘೋಷ ವಾಕ್ಯದೊಡನೆ ಭಾವನಾತ್ಮಕ ವಿದಾಯ ಹೇಳಿದರು. 
ಹುತಾತ್ಮ ಯೋಧ ಪ್ರಕಾಶ ಜಾಧವ ತಂದೆ ತಾಯಿ ಪತ್ನಿ ಹಾಗೂ ಮೂರು ತಿಂಗಳ ಹೆಣ್ಣು ಮಗುವನ್ನ ಅಗಲಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಯೋಧನ ಅಂತ್ಯ ಸಂಸ್ಕಾರಲ್ಲಿ 10 ಸಾವಿರಕ್ಕಿಂತಲೂ ಹೆಚ್ಚಿನ ಜನ ಭಾಗಿಯಾಗಿದ್ದರು. ಅಲ್ಲದೆ ಜನಪ್ರತಿನಿಧಿಗಳಾದ ಸಂಸದ ಪ್ರಕಾರ ಹುಕ್ಕೇರಿ, ಶಾಸಕಿ ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments