Webdunia - Bharat's app for daily news and videos

Install App

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಗಂಡನನ್ನೇ ಕೊಲೆ ಮಾಡಿಸಿದ ಪತ್ನಿ!

Webdunia
ಮಂಗಳವಾರ, 6 ಡಿಸೆಂಬರ್ 2022 (09:26 IST)
ಕೋಲಾರ : ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು ಪ್ರಿಯಕರನಿಂದಲೇ ಪತಿಯನ್ನ ಕೊಲೆ ಮಾಡಿಸಿರುವ ಘಟನೆ ನಡೆದಿದ್ದು,

ಪತ್ನಿ ಹಾಗೂ ಪ್ರಿಯಕರನನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಚಂಬೆ ಗ್ರಾಮದ ಆನಂದ್ ಕೊಲೆಯಾದ ವ್ಯಕ್ತಿ. ಆನಂದ್ ಕಳೆದ ನವೆಂಬರ್ 21 ರಂದು ಕಾಣೆಯಾಗಿದ್ದರು. ಈ ಸಂಬಂಧ ಕೋಲಾರದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು.

ನಂತರ ಆನಂದ್ನನ್ನು ಕೊಲೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಬಿ.ಮಾಕನಹಳ್ಳಿ ವ್ಯಾಪ್ತಿಯಲ್ಲಿ ಬಿಸಾಡಿರುವುದು ಗೊತ್ತಾಗಿದೆ. ಈ ಸಂಬಂಧ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದ ನಂದಗುಡಿ ಪೊಲೀಸರು ಕೊಲೆ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಸಂಬಂಧ: ಪತ್ನಿ ಚೈತ್ರಾ ಹಾಗೂ ಚಲಪತಿ ನಡುವೆ ಅಕ್ರಮ ಸಂಬಂಧವಿತ್ತು. ಈ ವಿಚಾರ ಆನಂದನಿಗೆ ಗೊತ್ತಾಗಿದ್ದರಿಂದ ಪ್ರಿಯಕರನೊಂದಿಗೆ ಸೇರಿ ಪತಿಯನ್ನ ಮುಗಿಸಿದ್ದಾಳೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. 

ಘಟನೆ ಸಂಬಂಧ ಮಾಸ್ತಿ ಹಾಗೂ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂದಗುಡಿ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments