Webdunia - Bharat's app for daily news and videos

Install App

ಪ್ರಿಯಕರನ ನೆರವಿನಿಂದ ಪತಿಯನ್ನು ಹತ್ಯೆಗೈದ ಪತ್ನಿ

Webdunia
ಬುಧವಾರ, 8 ನವೆಂಬರ್ 2023 (18:00 IST)
ಪತಿಯನ್ನು ಕೊಂದು ಅವನು ಹೃದಯಾಘಾತದಿಂದ ಸತ್ತಿದ್ದಾನೆಂದು ಹೇಳಿ ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ ಮಹಿಳೆ ಮತ್ತು ಅವಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 28 ವರ್ಷದ ಹಂಸರೇಖಾ 38 ವರ್ಷದ ಆರ್ಮುಗಂ ಜೊತೆ ಸೇರಿ ಪತಿ ಸತ್ಯನಾರಾಯಣ ಎಂಬವರನ್ನು ಕೊಲ್ಲುವ ಸಂಚು ರೂಪಿಸಿದರು. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಅವಳಿಗೆ ಸತತವಾಗಿ ಚಿತ್ರಹಿಂಸೆಯನ್ನು ನೀಡುತ್ತಿದ್ದ.
 
 ಇದಲ್ಲದೇ ಪ್ರತಿದಿನ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರಿಂದ ರೇಖಾ ಬೇಸರಗೊಂಡಿದ್ದಳು. 6 ತಿಂಗಳ ಹಿಂದೆ ರೇಖಾ ಆರ್ಮುಗಂ ಸ್ನೇಹ ಮಾಡಿದಾಗ ಪತಿ ನಡವಳಿಕೆ ಕುರಿತು ಅವಳು ಹೇಳಿದಳು. ಅವರಿಬ್ಬರ ನಡುವೆ ಅನೈತಿಕ ಸಂಬಂಧ ಹುಟ್ಟಿಕೊಂಡಿತು. ಈ ಬಗ್ಗೆ ಪತಿಗೆ ಸುಳಿವು ಸಿಕ್ಕಿ ಪತ್ನಿ ಜೊತೆ ಜಗಳವಾಡುತ್ತಿದ್ದ. ಕಳೆದ ಸೋಮವಾರ ಕುಡಿದ ಮತ್ತಿನಲ್ಲಿ ಪತಿ ಹೊಡೆದಾಗ ಆರ್ಮುಗಂಗೆ ಅವಳು ಕರೆ ಮಾಡಿ ಪತಿಯನ್ನು ಕೊಲ್ಲಲು ಸಂಚು ರೂಪಿಸಿದರು.
 
ಆರ್ಮುಗಂ ಅವನ ಕುತ್ತಿಗೆ ಅಮುಕಿದಾಗ ರೇಖಾ ಅವನನ್ನು ನೆಲಕ್ಕೆ ಬೀಳಿಸಿದ್ದಳು. ಪತಿ ಮೃತಪಟ್ಟ ಮೇಲೆ ಹೃದಯಾಘಾತದಿಂದ ಸತ್ತಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದಳು. ಪತಿಯ ಸೋದರಿ ಅಂಜಲಿ ತನ್ನ ಸೋದರನ ಕುತ್ತಿಗೆಯಲ್ಲಿ ಉಗುರಿನ ಗುರುತುಗಳಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಮತ್ತಷ್ಟು ತನಿಖೆಗೆ ಒಳಪಡಿಸಿದಾಗ ರೇಖಾ ತಪ್ಪೊಪ್ಪಿಕೊಂಡಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments