ಪತಿ ಗಲಾಟೆ ಮಾಡುತ್ತಾನೆ ಎಂದು ಪ್ರಿಯಕರನಿಂದ ಕೊಲೆ ಮಾಡಿಸಿದ ಪತ್ನಿ!

Webdunia
ಭಾನುವಾರ, 10 ಜುಲೈ 2022 (11:29 IST)
ಮಂಡ್ಯ : ಪ್ರಿಯಕರನ ಜೊತೆ ಸೇರಿ ಪತಿಯನ್ನು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿ, ಅಮಾಯಕಿ ಎನ್ನುವ ರೀತಿಯಲ್ಲಿ ಡ್ರಾಮಾ ಮಾಡಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಗೌರಿ ಕೊಲೆ ಮಾಡಿದ ಆರೋಪಿ. ಈಕೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ತಲಕಾಡು ಫೈಲ್ನ ನಿವಾಸಿ. ಈಕೆ ತನ್ನ ಪತಿ ಸುಂದರ್ ರಾಜ್ನನ್ನು ಇದೇ ತಿಂಗಳ 2ರಂದು ಕೆಆರ್ಎಸ್ ಹೊರವಲಯದಲ್ಲಿರುವ ಹುಲಿಕೆರೆಯ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಳು. ಆದರೆ ಪೊಲೀಸರು ಸುಂದರ್ ರಾಜ್ ಕೊಲೆಯ ವಿಷಯವನ್ನು ತಿಳಿಸಿದಾಗ ಹೈಡ್ರಾಮಾವನ್ನೇ ಮಾಡಿದ್ದಳು.

ಅಷ್ಟೇ ಅಲ್ಲದೇ ಮಾಧ್ಯಮಗಳ ಮುಂದೆ ಆಕೆ, ನನ್ನ ಗಂಡ ನಿನ್ನೆ ಮನೆಗೆ ಬಂದಿದ್ದ. ಅದಾದ ನಂತರ ಮನೆಗೆ ಬಂದಿಲ್ಲ. ಇದೀಗ ನನ್ನ ಗಂಡನನ್ನು ಯಾರೋ ಕೊಲೆ ಮಾಡಿದ್ದಾರೆ. ಆತನನ್ನು ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ನನ್ನ ಗಂಡನಿಗೆ ಯಾರು ಶತ್ರುಗಳು ಇರಲಿಲ್ಲ ಎಂದು ಕಣ್ಣೀರು ಹಾಕಿದ್ದಳು. 

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆ ವೇಳೆ ಗೌರಿಯ ಪ್ರಿಯಕರ ಪರಮೇಶ್ಚಾರಿಯನ್ನು ವಿಚಾರಣೆ ನಡೆಸುತ್ತಾರೆ. ಆ ಬಳಿಕ ಇವರಿಗೆ ಸುಂದರ್ ರಾಜ್ನನ್ನು ಕೊಲೆ ಮಾಡಿರುವುದು ಅಮಾಯಕಿಯಂತೆ ನಟಿಸುತ್ತಿರುವ ಪತ್ನಿ ಗೌರಿ ಎಂದು ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments