ಹಣ ಕಟ್ಟದ ಮಹಿಳೆಗೆ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ

Webdunia
ಬುಧವಾರ, 23 ಜನವರಿ 2019 (16:47 IST)
ಹಣ ಕಟ್ಟದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿ ಆ ಬಳಿಕ ಅಮಾನವೀಯವಾಗಿ ವರ್ತಿಸಿರುವ ಘಟನೆ ನಡೆದಿದೆ.

ಹಣ ಕಟ್ಟದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿ ಬೀದಿಯಲ್ಲಿ ಸದಸ್ಯೆಯರು ಎಳೆದಾಡಿದ್ದಾರೆ. ಮಹಿಳಾ ಸಂಘದಲ್ಲಿ ಹಣ ಪಡೆದಿದ್ದ ಮಹಿಳೆ ಸಮಯಕ್ಕೆ ಸರಿಯಾಗಿ ಹಣ ಮರುಪಾವತಿ ಮಾಡಿಲ್ಲವೆಂದು ಸಂಘದ ಇತರೆ ಮಹಿಳಾ ಸದಸ್ಯೆಯರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಆ ಬಳಿಕ ಬೀದಿಯಲ್ಲಿ ಎಳೆದಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಸವಿತಾ ಎಂಬ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ.

ಕಾಲಲ್ಲಿ ಒದ್ದು ಕಿರುಚಾಡಿದರೂ ಬಿಡದೇ ನಡು ಬೀದಿಯಲ್ಲಿ ಎಳೆದೊಯ್ದು ಅಮಾನವೀಯವಾಗಿ ಇತರೆ ಸದಸ್ಯೆಯರು ವರ್ತಿಸಿದ್ದಾರೆ. ಸವಿತಾರನ್ನ ಎಳೆ ದೊಯ್ಯುವಾಗ ಬೀದಿ ನಾಯಿಯೊಂದು ಕಚ್ಚಲು ಪ್ರಯತ್ನಿಸುತ್ತಿದ್ದು, ನೋಡುತ್ತಾ ನಿಂತ ಸಾರ್ವಜನಿಕರು ಮಹಿಳೆಯ ಸಹಾಯಕ್ಕೆ ಬರದೆ  ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ್ದಾರೆ. 

ಗುಬ್ಬಿ ಪಟ್ಟಣದ ಮಡಿವಾಳ ಬೀದಿಯ ನಿವಾಸಿ ಸವಿತಾಳನ್ನ ಆಕೆಯ ಗಂಡ ತೊರೆದು ಹೋಗಿದ್ದು ಈಕೆ ಮನೆಗೆಲಸ ಮಾಡಿಕೊಂಡು ತನ್ನ ಮಗುವನ್ನ ಸಾಕಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು. ಪಟ್ಟಣದ ಎಸ್ ಕೆಎಸ್ ಮಹಿಳಾ ಸಂಘದಲ್ಲಿ ಕಳೆದ ಕೆಲ ದಿನಗಳ ಹಿಂದೆ 25 ಸಾವಿರ ಹಣ ಸಾಲ ಪಡೆದು ಈಗಾಗಲೇ ಹತ್ತು ಸಾವಿರ ಮರುಪಾವತಿ ಮಾಡಿದ್ದಾರೆ.

ಉಳಿದ ಹಣ ನೀಡಲು ಸತಾಯಿಸುತ್ತಿದ್ದಾರೆಂದು ಆರೋಪಿಸಿ ಸಂಘದ ಸದಸ್ಯೆಯರಾದ ಜಯಮ್ಮ, ಸಾಕಮ್ಮ ಎಂಬುವರು ನಡುಬೀದಿಯಲ್ಲೆ ಈ ಕೃತ್ಯ ಎಸಗಿದ್ದಾರೆ. ದೌರ್ಜನ್ಯ ಎಸಗಿದ ಮಹಿಳೆಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments