Webdunia - Bharat's app for daily news and videos

Install App

ಆಕಸ್ಮಿಕವಾಗಿ ಅಜ್ಜಿಯನ್ನು ಕೊಂದ ಮಹಿಳೆ, ಬಳಿಕ ತಾನೂ ನೇಣಿಗೆ ಶರಣು

Webdunia
ಭಾನುವಾರ, 27 ಫೆಬ್ರವರಿ 2022 (20:34 IST)
25 ವರ್ಷದ ಮಹಿಳೆಯೊಬ್ಬರು ಆಕಸ್ಮಿಕವಾಗಿ ತನ್ನ ಅಜ್ಜಿಯನ್ನು ಗೋಡೆಗೆ ತಳ್ಳಿದ್ದು, ಅಜ್ಜಿ ಸಾವನ್ನಪ್ಪಿದ್ದಾರೆ. ಅಜ್ಜಿ ಸಾವಿನಿಂದ ಆಘಾತಕ್ಕೊಳಗಾದ ಮಹಿಳೆ ಬಳಿಕ ತಾನೂ  ನೇಣು ಬಿಗಿದುಕೊಂಡು25 ವರ್ಷದ ಮಹಿಳೆಯೊಬ್ಬರು ಆಕಸ್ಮಿಕವಾಗಿ ತನ್ನ ಅಜ್ಜಿಯನ್ನು ಗೋಡೆಗೆ ತಳ್ಳಿದ್ದು, ಅಜ್ಜಿ ಸಾವನ್ನಪ್ಪಿದ್ದಾರೆ. ಅಜ್ಜಿ ಸಾವಿನಿಂದ ಆಘಾತಕ್ಕೊಳಗಾದ ಮಹಿಳೆ ಬಳಿಕ ತಾನೂ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಅವರ ಮನೆಯಲ್ಲಿ ನಡೆದಿದೆ.
 
ಮಾರುತಿ ಲೇಔಟ್ ನಿವಾಸಿಗಳಾದ ಬಿಕಾಂ ಪದವೀಧರರಾದ ಮಮತಾ (25) ಅವರ ಅಜ್ಜಿ ಜಯಮ್ಮ (70) ಸಂಜೆ 4.30ರ ಸುಮಾರಿಗೆ ಇಬ್ಬರೂ ಜಗಳ ಮಾಡಿದ್ದಾರೆ. ಈ ವೇಳೆ ಮಮತಾ ತಮ್ಮ ಅಜ್ಜಿಯನ್ನು ಗೋಡೆಗೆ ತಳ್ಳಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜಯಮ್ಮ ರಕ್ತಸ್ರಾವವಾಗಿ ಕುಸಿದು ಬಿದ್ದಿದ್ದಾರೆ. ಆಕೆ ಸತ್ತಿರುವುದನ್ನು ಕಂಡು ಆಘಾತಕ್ಕೊಳಗಾದ ಮಮತಾ ಬೆಡ್ ರೂಮಿಗೆ ಬೀಗ ಹಾಕಿಕೊಂಡು ನೇಣಿಗೆ ಶರಣಾಗಿದ್ದಾರೆ. ಮಮತಾ ಅವರ ಸಹೋದರ ಚೇತನ್ ಅವರು ಕೆಲಸದಿಂದ ಹಿಂದಿರುಗಿದ ನಂತರ ಮೃತದೇಹಗಳು ಪತ್ತೆಯಾಗಿವೆ. ಅವರು ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಬಳಿಕ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
 
ಮಮತಾ ಅವರ 3 ತಿಂಗಳ ಮಗು ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ ನಂತರ ಖಿನ್ನತೆಗೆ ಒಳಗಾಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಂಗಡಿ ನಡೆಸುತ್ತಿರುವ ಪತಿ ಮಂಜುನಾಥ್ ಅವರು ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ.
 
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು  ಜ್ಞಾನಭಾರತಿ ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments