Webdunia - Bharat's app for daily news and videos

Install App

ಹಸುಗೂಸು ಬಿಟ್ಟು ಹೋಗಿದ್ದ ಮಹಿಳೆ ಮರಳಿ ಸಿಕ್ಕ ಮೇಲೆ ಹೇಳಿದ್ದೇನು?

Webdunia
ಶನಿವಾರ, 7 ಜುಲೈ 2018 (17:03 IST)
ಸಂತಾನಹರಣ ಶಸ್ರ್ತಚಿಕಿತ್ಸೆಗೆಂದು ಬಂದು 3 ತಿಂಗಳ  ಹಸುಗೂಸನ್ನು ಬಿಟ್ಟು ಜೂ.20 ರ ರಾತ್ರಿ ಚಾಮರಾಜನಗರ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇದೀಗ ಪತ್ತೆಯಾಗಿದ್ದಾರೆ. ಹಾಗಾಗಿ ಹಸುಗೂಸು ತಾಯಿಯ ಮಡಿಲು ಸೇರುವ ಮೂಲಕ ನಾನಾ ರೀತಿಯ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ.

 
ಗಂಡನೊಂದಿಗೆ ವೈವಾಹಿಕ ಕಲಹದಿಂದ ಬೇಸತ್ತು ಹೋಗಿದ್ದಾಗಿ ಮಹಿಳೆ ಹೇಳಿಕೆ ನೀಡಿದ್ದು, ಇಷ್ಟು ದಿನ ಗುಂಡ್ಲುಪೇಟೆ ತಾಲ್ಲೂಕಿನ ಹರವೆ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಇನ್ನು ಪ್ರಕರಣ ಸುಖಾಂತ್ಯವಾಗಿದ್ದು ಪತಿ ಮನೆಗೆ ತೆರಳಿದ್ದಾರೆ  ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣ ಹಿನ್ನೆಲೆ: ಗುಂಡ್ಲುಪೇಟೆ ತಾಲ್ಲೂಕಿನ ಕಣ್ಣೆಗಾಲ ಗ್ರಾಮದ ಜ್ಯೋತಿ ಎಂಬಾಕೆ  ನಾಲ್ಕು ವರ್ಷಗಳ ಹಿಂದೆ ನಂಜನಗೂಡಿನ ಮಹದೇವಸ್ವಾಮಿ ಎಂಬಾತನೊಂದಿಗೆ ಮದುವೆಯಾಗಿದ್ದು,  ದಂಪತಿಗೆ 3 ವರ್ಷ  ಹಾಗೂ 3  ತಿಂಗಳ ಎರಡು ಹೆಣ್ಣು ಮಕ್ಕಳಿವೆ. 
ಎರಡೇ ಮಕ್ಕಳು ಸಾಕೆಂದು ಪತಿ ಮಹದೇವ ಅವರು  ಜ್ಯೋತಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ ವೇಳೆ  ಆಸ್ಪತ್ರೆಯಿಂದ ಆಕೆ ನಾಪತ್ತೆಯಾಗಿದ್ದರು.

ಹೆತ್ತ ಕಂದನನ್ನು ಬಿಟ್ಟು ರಾತ್ರೋರಾತ್ರಿ ಆಸ್ಪತ್ರೆಯಿಂದ ಹೊರಹೋಗುವ ದೃಶ್ಯ ಆಸ್ಪತ್ರೆಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು‌.  ನಾಪತ್ತೆಯಾಗಿರುವ ಕುರಿತು ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗು ಆಕೆಯ ಪತಿ  ಚಾಮರಾಜನಗರ  ಪಟ್ಟಣ ಪೋಲೀಸ್ ಠಾಣೆಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments