Webdunia - Bharat's app for daily news and videos

Install App

ದೊಡ್ಮನೆಗೆ ಎಂಟ್ರಿಯಾಗುತ್ತಿದ್ದ ಹಾಗೇ ಕಿಚ್ಚು ಹತ್ತಿಸಿದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳ ಚುಚ್ಚು ಮಾತು

Sampriya
ಸೋಮವಾರ, 18 ನವೆಂಬರ್ 2024 (16:35 IST)
Photo Courtesy X
ಬೆಂಗಳೂರು: ದೊಡ್ಮನೆಗೆ ಎಂಟ್ರಿಯಾಗುತ್ತಿದ್ದ ಹಾಗೇ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳಾದ ರಜತ್ ಹಾಗೂ ಶೋಭಾ ಶೆಟ್ಟಿ ಮನೆ ಸದಸ್ಯರಿಗೆ ಶಾಕ್ ನೀಡಿದ್ದಾರೆ.

ಅನುಷಾ ಅವರು ಮನೆಯಿಂದ ಎಲಿಮಿನೇಟ್ ಆಗುತ್ತಿದ್ದ ಹಾಗೇ ತೆಲುಗು ಬಿಗ್‌ ಬಾಸ್‌ನಲ್ಲಿ ಭಾಗವಹಿಸಿದ್ದ ಕನ್ನಡ ನಟಿ ಶೋಭಾ ಶೆಟ್ಟಿ ಮತ್ತು ಕನ್ನಡ ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ರಜತ್‌ ಕಿಶನ್‌ ವೈಲ್ಡ್‌ ಕಾರ್ಡ್‌ ಎಂಟ್ರಿ ಪಡೆದಿದ್ದಾರೆ.

ಇನ್ನೂ ದೊಡ್ಮನೆಗೆ ಎಂಟ್ರಿಯಾಗುತ್ತಿರುವ ಮುನ್ನವೇ ವೇದಿಕೆಯಲ್ಲಿ ಮನೆ ಸ್ಪರ್ಧಿಗಳಿಗೆ ಸವಾಲು ಎಸೆದಿದ್ದಾರೆ. ಇದೀಗ ಹೊಸದಾಗಿ ಮನೆ ಸೇರಿದ ಸ್ಪರ್ಧಿಗಳನ್ನು ನೋಡಿ ಮನೆಯ ಸದಸ್ಯರು ಗಲಿಬಿಲಿಗೊಂಡಿದ್ದಾರೆ. ಮನೆಯೊಳಗಡೆ ಒಬ್ಬೊಬ್ಬ ಸ್ಪರ್ಧಿಯ ಋಣಾತ್ಮಕ ಅಂಶಗಳನ್ನು ಎತ್ತಿಹಿಡಿದು, ತೆಂಗಿನ ಕಾಯಿಯನ್ನು ಒಡೆದಿದ್ದಾರೆ.

ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಮಂಜಣ್ಣ ಅವರು ತ್ರಿವಿಕ್ರಮ್ ಜತೆ ಸೇರಿ ರಜತ್‌ ಅವರಿಗೆ ಸರಿಯಾಗಿ ಬುದ್ಧಿ ಕಲಿಸುವ ಎಂದು ಮಾತುಕತೆ ನಡೆಸಿದ್ದಾರೆ.  ಇದನ್ನು ನೋಡಿದ ಬಿಗ್‌ಬಾಸ್ ಪ್ರಿಯರು ಮುಂದಿನ ಎಪಿಸೋಡ್‌ಗಳು ತುಂಬಾನೇ ಇಂಟ್ರೆಸ್ಟಿಂಗ್ ಆಗಿ ಇರ್ಬೋದು ಎಂದು ಲೆಕ್ಕಚಾರ ಹಾಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments