Webdunia - Bharat's app for daily news and videos

Install App

ಮನೆಮಂದಿ ಶುಭಕಾರ್ಯಕ್ಕೆ ತೆರಳಿದ್ರು; ಆ ಯುವಕ ಯಮಲೋಕ ಸೇರಿದ!

Webdunia
ಸೋಮವಾರ, 18 ಫೆಬ್ರವರಿ 2019 (16:46 IST)
ಮನೆಮಂದಿ ಶುಭಕಾರ್ಯಕ್ಕೆ ತೆರಳಿದ್ದ ವೇಳೆಯಲ್ಲಿ ಯುವಕನೊಬ್ಬ ಸಾವಿನ ಮನೆ ಸೇರಿದ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಮನೆಯ ಕೊಠಡಿಯೊಳಗೆ ನಾಡಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುಬ್ರಹ್ಮಣ್ಯದ ನಾಲ್ಕೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಜತ್ತಿಲ ಮನೆ ನಿವಾಸಿ ಪ್ರತಾಪ್(24) ಎಂಬವರು ಮನೆಯ ಕೊಠಡಿ ಒಳಗೆ ನಾಡಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಕೃಷಿಕ ಜತ್ತಿಲ ಜನಾರ್ಧನ ಎಂಬುವರ ಪುತ್ರ ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು. ಇತ್ತೀಚೆಗೆ ಅವರು ತವರಿಗೆ ಮರಳಿದ್ದರು.

ಬಳಿಕ ಸ್ಥಳಿಯವಾಗಿ ಸ್ವ-ಉದ್ಯೋಗ ಆರಂಬಿಸಿದ್ದರು. ಮನೆಯಲ್ಲಿ ಯಾರು ಇರಲಿಲ್ಲ. ತಂದೆ ಮತ್ತು ತಾಯಿ ಇಬ್ಬರು ಸಂಬಂಧಿಕರ ಶುಭ ಕಾರ್ಯಕ್ರಮಗಳಿಗೆ ತೆರಳಿದ್ದರು. ಸಹೋದರ ಕೂಡ ಹೊರಗಡೆ ತೆರಳಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಸದಸ್ಯರು ಸಂಜೆ ಮನೆಗೆ ವಾಪಸ್ಸಾದ ವೇಳೆ ರಕ್ತದ ಮಡುವಿನಲ್ಲಿ ಪ್ರತಾಪ್ ಬಿದ್ದುಕೊಂಡಿದ್ದರು. ಪಕ್ಕದಲ್ಲೇ ಬಂದೂಕು ಕೂಡ ಕಂಡುಬಂದಿದೆ.

ರಕ್ತದ ಮಡುವಿನಲ್ಲಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆದರೂ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments