Webdunia - Bharat's app for daily news and videos

Install App

ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಯ್ತು ಒಂದು ಚಿಕ್ಕ ಬೆಂಕಿ ಪೊಟ್ಟಣ

Webdunia
ಶುಕ್ರವಾರ, 28 ಡಿಸೆಂಬರ್ 2018 (06:51 IST)
ಕೊಪ್ಪಳ : ಬೆಂಕಿ ಪೊಟ್ಟಣ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಮಾಡಿದ್ದಕ್ಕೆ ಮನನೊಂದು 20 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದಲ್ಲಿ ನಡೆದಿದೆ.


ರಾಜೇಶ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಈತ ಹೊಲಕ್ಕೆ ನೀರು ಕಟ್ಟಲು ಹೋಗುವಾಗ ಬೆಂಕಿಪೊಟ್ಟಣ ಇಲ್ಲದ ಕಾರಣಕ್ಕೆ ಪಕ್ಕದಲ್ಲೆ ಇರುವ ಬುಡ್ಡಪ್ಪ ಎಂಬವರ ಹೋಟೆಲ್ ಗೆ ಬಂದು ಅಲ್ಲೆ ಇದ್ದ ಬೆಂಕಿ ಪೊಟ್ಟಣ ತೆಗೆದುಕೊಂಡು ಹೋಗಿದ್ದಾನೆ. ಆಗ ಹೋಟೆಲ್ ಮಾಲೀಕರಾದ ಬುಡ್ಡಪ್ಪ, ಶೇಖರಪ್ಪ, ಶಾಂತಮ್ಮ, ಲಕ್ಷ್ಮಿ ಎಂಬವರು ರಾಜೇಶನನ್ನು ಹಿಡಿದು, ಬೆಂಕಿಪೊಟ್ಟಣ ಕಳವು ಮಾಡುತ್ತೀಯಾ ಎಂದು ಥಳಿಸಿದ್ದಾರೆ.


ಈ ಘಟನೆಯಿಂದ ಮನನೊಂದ ರಾಜೇಶ್ ಕೆಲ ಹೊತ್ತಿನಲ್ಲೇ ತಮ್ಮ ಹೊಲಕ್ಕೆ ಹೋಗಿ ಅಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದು ಚಿಕ್ಕ ಬೆಂಕಿ ಪೊಟ್ಟಣ ತೆಗೆದುಕೊಂಡಿದ್ದಕ್ಕೆ ಮಗನಿಗೆ ಕಳ್ಳನೆಂದು ಅವಮಾನ ಮಾಡಿ  ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದಾರೆಂದು ರಾಜೇಶ್ ತಂದೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಹೋಟೆಲ್ ಮಾಲೀಕರಾದ ಬುಡ್ಡಪ್ಪ, ಶೇಖರಪ್ಪ, ಶಾಂತಮ್ಮ, ಲಕ್ಷ್ಮಿ ಎಂಬವರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments