Webdunia - Bharat's app for daily news and videos

Install App

ಮದುವೆ ಬಿಟ್ಟು ಬೇರೆ ಹುಡುಗರೊಂದಿಗೆ ಪರಾರಿಯಾದ ಯುವತಿಯರು ; ತಂದೆ, ತಾಯಿ ಆತ್ಮಹತ್ಯೆ

Webdunia
ಸೋಮವಾರ, 6 ಮೇ 2019 (13:02 IST)
ತನ್ನಿಬ್ಬರ ಪ್ರೀತಿಯ ಹೆಣ್ಣುಮಕ್ಕಳು ಬೇರೆ ಜಾತಿಯ ಯುವಕರೊಂದಿಗೆ ಓಡಿ ಹೋಗಿದ್ದರಿಂದ ಮನನೊಂದು ತಂದೆ-ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಬ್ಬರು ಮಕ್ಕಳು ಬೇರೆ ಯುವಕರೊಂದಿಗೆ ಪರಾರಿಯಾಗಿದ್ದಾರೆ. ಒಬ್ಬಳು ಮರಾಠಿ ಹುಡುಗನ ಜೊತೆ ಓಡಿ ಹೋದಳು.
ಕಿರಿಯ ಮಗಳು ಒಕ್ಕಲಿಗ ಹುಡುಗನೊಂದಿಗೆ ಓಡಿ ಹೋಗಿದ್ದಾಳೆ. ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿ ಮರಕ್ಕೆ ನೇಣು ಬಿಗಿದು ಮಸಣ ಸೇರಿದ್ದಾರೆ.  

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಬೇವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳೆದು ನಿಂತ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ತಮ್ಮ ಕಣ್ಣು ತುಂಬಿಕೊಳ್ಳುವ ತವಕದಲ್ಲಿದ್ದ ತಂದೆ ತಾಯಿಗಳಿಗೆ 
ಮಕ್ಕಳು  ಅಂತರ್ಜಾತಿಯ ವಿವಾಹ ಮಾಡಿಕೊಂಡು ನಿರಾಸೆ ಮೂಡಿಸಿದ್ದಾರೆ.

ಮಕ್ಕಳು ಮನಸ್ಸಿಗೆ ಮಾಡಿದ ಆಘಾತದಿಂದಾಗಿ ಚೌಡಪ್ಪ(47), ಸುವರ್ಣಮ್ಮ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಶ್ರೀ ಹಾಗೂ ಮಧುಶ್ರೀ ಓಡಿಹೋದವರು.

ಅನುಶ್ರೀ ಕಳೆದ ಎರಡು ವರ್ಷದ ಹಿಂದೆ ಮರಾಠಿ ಹುಡುಗನನ್ನು ಮದುವೆ ಆಗಿದ್ದಳು. ಇನ್ನು ಮಧುಶ್ರೀಗೆ ಮದುವೆ ಫಿಕ್ಸ್ ಆಗಿದ್ದು ಕಲ್ಯಾಣ ಮಂಟಪ ಬುಕ್ ಮಾಡಲಾಗಿತ್ತು. ಆದರೆ ಮಧುಶ್ರೀ, ರೆಡ್ಡಿ ಜನಾಂಗದ ಹುಡುಗನ ಜೊತೆ ಓಡಿ ಹೋಗಿ ಮದುವೆಯಾಗಿದ್ದಾಳೆ. ಇದರಿಂದ ತಂದೆ-ತಾಯಿಗೆ ಬರಸಿಡಿಲು ಬಡಿದಂತಾಗಿದೆ. ಮರಕ್ಕೆ ನೇಣು ಬಿಗಿದುಕೊಂಡು ತಮ್ಮ ಪ್ರಾಣ ಬಿಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments