Webdunia - Bharat's app for daily news and videos

Install App

ಮದುವೆ ಬಿಟ್ಟು ಬೇರೆ ಹುಡುಗರೊಂದಿಗೆ ಪರಾರಿಯಾದ ಯುವತಿಯರು ; ತಂದೆ, ತಾಯಿ ಆತ್ಮಹತ್ಯೆ

Webdunia
ಸೋಮವಾರ, 6 ಮೇ 2019 (13:02 IST)
ತನ್ನಿಬ್ಬರ ಪ್ರೀತಿಯ ಹೆಣ್ಣುಮಕ್ಕಳು ಬೇರೆ ಜಾತಿಯ ಯುವಕರೊಂದಿಗೆ ಓಡಿ ಹೋಗಿದ್ದರಿಂದ ಮನನೊಂದು ತಂದೆ-ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಬ್ಬರು ಮಕ್ಕಳು ಬೇರೆ ಯುವಕರೊಂದಿಗೆ ಪರಾರಿಯಾಗಿದ್ದಾರೆ. ಒಬ್ಬಳು ಮರಾಠಿ ಹುಡುಗನ ಜೊತೆ ಓಡಿ ಹೋದಳು.
ಕಿರಿಯ ಮಗಳು ಒಕ್ಕಲಿಗ ಹುಡುಗನೊಂದಿಗೆ ಓಡಿ ಹೋಗಿದ್ದಾಳೆ. ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿ ಮರಕ್ಕೆ ನೇಣು ಬಿಗಿದು ಮಸಣ ಸೇರಿದ್ದಾರೆ.  

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಬೇವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳೆದು ನಿಂತ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ತಮ್ಮ ಕಣ್ಣು ತುಂಬಿಕೊಳ್ಳುವ ತವಕದಲ್ಲಿದ್ದ ತಂದೆ ತಾಯಿಗಳಿಗೆ 
ಮಕ್ಕಳು  ಅಂತರ್ಜಾತಿಯ ವಿವಾಹ ಮಾಡಿಕೊಂಡು ನಿರಾಸೆ ಮೂಡಿಸಿದ್ದಾರೆ.

ಮಕ್ಕಳು ಮನಸ್ಸಿಗೆ ಮಾಡಿದ ಆಘಾತದಿಂದಾಗಿ ಚೌಡಪ್ಪ(47), ಸುವರ್ಣಮ್ಮ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಶ್ರೀ ಹಾಗೂ ಮಧುಶ್ರೀ ಓಡಿಹೋದವರು.

ಅನುಶ್ರೀ ಕಳೆದ ಎರಡು ವರ್ಷದ ಹಿಂದೆ ಮರಾಠಿ ಹುಡುಗನನ್ನು ಮದುವೆ ಆಗಿದ್ದಳು. ಇನ್ನು ಮಧುಶ್ರೀಗೆ ಮದುವೆ ಫಿಕ್ಸ್ ಆಗಿದ್ದು ಕಲ್ಯಾಣ ಮಂಟಪ ಬುಕ್ ಮಾಡಲಾಗಿತ್ತು. ಆದರೆ ಮಧುಶ್ರೀ, ರೆಡ್ಡಿ ಜನಾಂಗದ ಹುಡುಗನ ಜೊತೆ ಓಡಿ ಹೋಗಿ ಮದುವೆಯಾಗಿದ್ದಾಳೆ. ಇದರಿಂದ ತಂದೆ-ತಾಯಿಗೆ ಬರಸಿಡಿಲು ಬಡಿದಂತಾಗಿದೆ. ಮರಕ್ಕೆ ನೇಣು ಬಿಗಿದುಕೊಂಡು ತಮ್ಮ ಪ್ರಾಣ ಬಿಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments