Webdunia - Bharat's app for daily news and videos

Install App

ಆಶ್ರಯ ಕೊಟ್ಟ ಅಣ್ಣನ ಮನೆಯಲ್ಲೇ ಕಳ್ಳತನ

Webdunia
ಮಂಗಳವಾರ, 27 ಡಿಸೆಂಬರ್ 2022 (21:26 IST)
ಪ್ರೀತಿಸಿದವಳ ಆಸೆ ಪೂರೈಸುವ ಸಲುವಾಗಿ, ಆಶ್ರಯ ನೀಡಿ ಸಾಕುತ್ತಿದ್ದ ಅಣ್ಣನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಆಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಇರ್ಫಾನ್ ಬಂಧಿತ ಆರೋಪಿ.. ಆಡುಗೋಡಿಯ ಮಹಾಲಿಂಗೇಶ್ವರ ಬಂಡೆ ಏರಿಯಾದಲ್ಲಿ ಅಣ್ಣ ಸಲ್ಮಾನ್, ಅತ್ತಿಗೆ ಹಾಗೂ ತಾಯಿಯೊಂದಿಗೆ ವಾಸವಿದ್ದ ಆರೋಪಿ ನಿರುದ್ಯೋಗಿಯಾಗಿದ್ದ. ಸಹೋದರ ಸಲ್ಮಾನ್ ಸುದ್ದುಗುಂಟೆಪಾಳ್ಯದಲ್ಲಿ ಸೇಲ್ಸ್​ಮ್ಯಾನ್​ ಕೆಲಸ ಮಾಡಿಕೊಂಡಿದ್ದ. ಇನ್ನು ತಮ್ಮ ಇರ್ಫಾನ್ ಮಾತ್ರ ಕೆಲಸವಿಲ್ಲದೇ ಓಡಾಡಿಕೊಂಡಿದ್ದ. ಕೆಲಸವಿಲ್ಲದಿದ್ದರೂ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಆರೋಪಿ, ಆಕೆಯನ್ನು ಗೋವಾಗೆ ಪ್ರವಾಸ ಹೋಗುವ ಬಯಕೆಯನ್ನು ಪೂರ್ಣಗೊಳಿಸಲು ಮನೆಯಲ್ಲಿ ಬೀರುವಿನಲ್ಲಿದ್ದ 103 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ನವೆಂಬರ್ 29ರಂದು‌ ಸಲ್ಮಾನ್ ಮನೆಯ ಬೀರು ಪರಿಶೀಲಿಸಿದಾಗ ಕಳ್ಳತನ ಬಯಲಾಗಿತ್ತು.. ಅದೇ ಸಂದರ್ಭದಲ್ಲಿ 4-5 ದಿನಗಳಿಂದ ಮನೆಗೆ ಬಾರದೇ ಇದ್ದ ತಮ್ಮ ಇರ್ಫಾನ್ ವಿರುದ್ಧ ಅನುಮಾನ ವ್ಯಕ್ತಪಡಿಸಿ ಆಡುಗೋಡಿ ಠಾಣೆಗೆ ಸಲ್ಮಾನ್ ದೂರು ನೀಡಿದ್ದರು. ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಗೋವಾಗೆ ಹೋಗಿ ಮೋಜು ಮಸ್ತಿಯಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ.. ಬಂಧಿತನಿಂದ ಐದು ಲಕ್ಷ ಮೌಲ್ಯದ 103 ಗ್ರಾಂ ಚಿನ್ನಾಭರಣ ಹಾಗೂ ಒಂದು DSLR ಕ್ಯಾಮರಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments