Webdunia - Bharat's app for daily news and videos

Install App

ತಪಾಸಣೆಯ ನೆಪದಲ್ಲಿ ಚಿನ್ನದ ಸರ ಕಳವು – ಆಸ್ಪತ್ರೆ ವಿರುದ್ದ ದೂರು ದಾಖಲು!

geetha
ಸೋಮವಾರ, 12 ಫೆಬ್ರವರಿ 2024 (15:29 IST)
ಬೆಂಗಳೂರು :ತಪಾಸಣೆಯ ನೆಪದಲ್ಲಿ  ಆಸ್ಪತ್ರೆ ಸಿಬ್ಬಂದಿ ನನ್ನ ಚಿನ್ನದ ಸರವನ್ನು ಕದ್ದಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ನರ್ಸ್‌ ಹಾಗೂ ಸ್ವಚ್ಛತಾ ಸಿಬ್ಬಂದಿಗಳ ವಿರುದ್ದ ದೂರು ದಾಖಲಿಸಿದ್ದಾರೆ. ರಾಜೇಶ್ವರಿ ಚಿನ್ನದ ಆಭರಣ ಕಳೆದುಕೊಂಡಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ನರ್ಸ್‌ ಗಳಾದ ಅಕ್ಷತಾ, ಅಧೀನ ಮತ್ತು ಸ್ವಚ್ಛತಾ ಸಿಬ್ಬಂದಿ ಪ್ರೇಮಮ್ಮ ವಿರುದ್ದ ದೂರು ದಾಖಲಾಗಿದೆ. 
 
 ರಾಜೇಶ್ವರಿ ಎದೆನೋವು ಎಂದು ಫೆ. 9 ರಂದು ಮೂಡಲ ಪಾಳ್ಯದ ಬಳಿಯಿರುವ ಶೋಭಾ ಆಸ್ಪತ್ರೆಗೆ ತೆರಳಿದ್ದರು. ಇಸಿಜಿ ಮಾಡುವಾಗ ಅವರ ಚಿನ್ನದ ಸರವನ್ನು ತೆಗೆಯಲು ಹೇಳಲಾಗಿತ್ತು. ಅದನ್ನು ತನ್ನ ಪತಿಯ ಕೈಗೆ ನೀಡುವೆನೆಂದರೂ ಸಹ ಕೇಳದೆ ಆಸ್ಪತ್ರೆಯ ಸಿಬ್ಬಂದಿ ಕೇವಲ ಐದು ನಿಮಿಷ ಅಷ್ಟೇ ಎಂದು ನೆಪ ಹೇಳಿ ದಿಂಬಿನ ಕೆಳಗೆ ಇರಿಸಲಾಗಿತ್ತು. ಬಳಿಕ ಆಸ್ಪತ್ರೆಯಲ್ಲಿಯೇ ಮರೆತು ರಾಜೇಶ್ವರಿ ಮನೆಗೆ ತೆರಳಿದ್ದರು. ಮಾರನೆ ದಿನ ಬಂದು ಕೇಳಿದಾಗ ಆಸ್ಪತ್ರೆಯ ಸಿಬ್ಬಂದಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆಂದು ರಾಜೇಶ್ವರಿ ಆರೋಪಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments