Select Your Language

Notifications

webdunia
webdunia
webdunia
webdunia

ಶಾಸಕರ ಮನೆಗೆ ಕನ್ನ; ದೋಚಿಕೊಂಡು ಹೋಗಿದ್ದು ಏನೆಲ್ಲಾ?

ಶಾಸಕರ ಮನೆಗೆ ಕನ್ನ; ದೋಚಿಕೊಂಡು ಹೋಗಿದ್ದು ಏನೆಲ್ಲಾ?
ಚಿತ್ರದುರ್ಗ , ಶನಿವಾರ, 20 ಏಪ್ರಿಲ್ 2019 (13:49 IST)
ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಶಾಸಕರೊಬ್ಬರ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಕೂಡ್ಲಗಿ ಶಾಸಕರ ನಿವಾಸದಲ್ಲಿ ಕಳ್ಳತನ ಮಾಡಲಾಗಿದೆ. ಶಾಸಕ ಎನ್.ವೈ.ಗೋಪಾಲಕೃಷ್ಣ ನಿವಾಸದಲ್ಲಿ ಕಳವು ಆಗಿದೆ.

ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆಯಲ್ಲಿನ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ಸಾವಿರಾರು ರೂ. ಮೌಲ್ಯದ ವಸ್ತುಗಳು ಮತ್ತು ಹಣ ಕಳ್ಳತನವಾಗಿದೆ. ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ.

ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಿರುವ ಖದೀಮರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೋಟೆ ಠಾಣೆ CPI
ಪ್ರಕಾಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  




Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಲ್ ಸಂತೋಷ್ ಗೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ