ಮದ್ಯ ನಿಷೇ​ಧಿಸಿ ಪ್ರತಿ​ಭ​ಟನೆ ನಡೆ​ಸಿದ ಮಹಿ​ಳೆ​ಯರು; ಏಕಾ​ಏಕಿ ಮದ್ಯ ನಿಷೇಧ ಜಾರಿಗೆ ತರು​ವುದು ಸಾಧ್ಯ​ವಿಲ್ಲ ಎಂದ ಸಿಎಂ

Webdunia
ಗುರುವಾರ, 31 ಜನವರಿ 2019 (15:37 IST)
ಬೆಂಗಳೂರು : ಮದ್ಯ ನಿಷೇ​ಧಿಸುವಂತೆ  ಆಗ್ರಹಿಸಿ ರಾಜ​ಧಾ​ನಿ​ಯಲ್ಲಿ ಪ್ರಬಲ ಪ್ರತಿ​ಭ​ಟನೆ ನಡೆ​ಸಿದ ಮಹಿ​ಳೆ​ಯರ ಪ್ರತಿ​ನಿ​ಧಿ​ಗಳು ಹಾಗೂ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ನಡು​ವಿನ ಸಂಧಾನ ಮುರಿದು ಬಿದ್ದಿದೆ.


ಗಂಡಸರು ಮದ್ಯದ ಸಹವಾಸ ಮಾಡಿ ಅವರ ಹೆಂಡ್ತಿ ಮಕ್ಕಳು ಹಾಗೂ ಮನೆ ಮಂದಿ ಉಪವಾಸವಿರುವಂತಾಗಿದೆ. ಈ ಮದ್ಯದಿಂದ ಚಿಕ್ಕಮಕ್ಕಳ ಜೀವನವೂ ಹಾಳುಗುತ್ತಿದೆ ಎಂದು ಸಾವಿರಾರು ಮಹಿಳೆಯರು ಮದ್ಯವನ್ನು ನಿಷೇಧ ಮಾಡಬೇಕೆಂದು ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆ​ಲೆ​ಯಲ್ಲಿ ಮಹಿಳಾ ಹೋರಾ​ಟ​ಗಾ​ರರ ಪ್ರತಿನಿಧಿಗಳಾದ ರಂಗ​ಕರ್ಮಿ ಪ್ರಸನ್ನ ಹಾಗೂ ಸ್ವರ್ಣ ಭಟ್‌ ಅವ​ರೊಂದಿಗೆ ಮುಖ್ಯ​ಮಂತ್ರಿ ಕುಮಾ​ರ​ಸ್ವಾಮಿ ಮಾತು​ಕತೆ ನಡೆ​ಸಿ ಏಕಾ​ಏಕಿ ಮದ್ಯ ನಿಷೇಧ ಜಾರಿಗೆ ತರು​ವುದು ಸಾಧ್ಯ​ವಿಲ್ಲ. ಈ ಬಗ್ಗೆ ನಿಮ್ಮನ್ನು ಒಳ​ಗೊಂಡು ಪ್ರತ್ಯೇಕ ಸಭೆ ನಡೆ​ಸು​ತ್ತೇನೆ. ಈಗ ಪ್ರತಿಭಟನೆ ಕೈ ಬಿಡಿ ಎಂದು ಮುಖ್ಯ​ಮಂತ್ರಿ ಮಾಡಿದ ಮನ​ವಿ ಮಾಡಿದ್ದಾರೆ.


ಆದರೆ ಇದಕ್ಕೆ ಒಪ್ಪದ ಪ್ರತಿ​ಭ​ಟ​ನಾ​ಕಾ​ರರು ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ಹೋರಾಟಗಾರರು ಮನವಿಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಅನಿವಾರ್ಯವಾಗಿ ಒಂದಷ್ಟು ಜನರನ್ನು ವಶಕ್ಕೆ ಪಡೆದು ಪ್ರತಿಭಟನಾಕಾರರು ಸ್ಥಳದಿಂದ ಚದುರುವಂತೆ ಮಾಡಿದರು. ಕೆಲವರನ್ನು ವಿವಿಧ ಪೊಲೀಸ್‌ ಠಾಣೆಗಳಿಗೆ ಕರೆದೊಯ್ದು ಊರುಗಳಿಗೆ ಹೋಗಲು ವ್ಯವಸ್ಥೆ ಮಾಡಲಾಯಿತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ