Webdunia - Bharat's app for daily news and videos

Install App

ಮದ್ಯ ನಿಷೇ​ಧಿಸಿ ಪ್ರತಿ​ಭ​ಟನೆ ನಡೆ​ಸಿದ ಮಹಿ​ಳೆ​ಯರು; ಏಕಾ​ಏಕಿ ಮದ್ಯ ನಿಷೇಧ ಜಾರಿಗೆ ತರು​ವುದು ಸಾಧ್ಯ​ವಿಲ್ಲ ಎಂದ ಸಿಎಂ

Webdunia
ಗುರುವಾರ, 31 ಜನವರಿ 2019 (15:37 IST)
ಬೆಂಗಳೂರು : ಮದ್ಯ ನಿಷೇ​ಧಿಸುವಂತೆ  ಆಗ್ರಹಿಸಿ ರಾಜ​ಧಾ​ನಿ​ಯಲ್ಲಿ ಪ್ರಬಲ ಪ್ರತಿ​ಭ​ಟನೆ ನಡೆ​ಸಿದ ಮಹಿ​ಳೆ​ಯರ ಪ್ರತಿ​ನಿ​ಧಿ​ಗಳು ಹಾಗೂ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ನಡು​ವಿನ ಸಂಧಾನ ಮುರಿದು ಬಿದ್ದಿದೆ.


ಗಂಡಸರು ಮದ್ಯದ ಸಹವಾಸ ಮಾಡಿ ಅವರ ಹೆಂಡ್ತಿ ಮಕ್ಕಳು ಹಾಗೂ ಮನೆ ಮಂದಿ ಉಪವಾಸವಿರುವಂತಾಗಿದೆ. ಈ ಮದ್ಯದಿಂದ ಚಿಕ್ಕಮಕ್ಕಳ ಜೀವನವೂ ಹಾಳುಗುತ್ತಿದೆ ಎಂದು ಸಾವಿರಾರು ಮಹಿಳೆಯರು ಮದ್ಯವನ್ನು ನಿಷೇಧ ಮಾಡಬೇಕೆಂದು ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆ​ಲೆ​ಯಲ್ಲಿ ಮಹಿಳಾ ಹೋರಾ​ಟ​ಗಾ​ರರ ಪ್ರತಿನಿಧಿಗಳಾದ ರಂಗ​ಕರ್ಮಿ ಪ್ರಸನ್ನ ಹಾಗೂ ಸ್ವರ್ಣ ಭಟ್‌ ಅವ​ರೊಂದಿಗೆ ಮುಖ್ಯ​ಮಂತ್ರಿ ಕುಮಾ​ರ​ಸ್ವಾಮಿ ಮಾತು​ಕತೆ ನಡೆ​ಸಿ ಏಕಾ​ಏಕಿ ಮದ್ಯ ನಿಷೇಧ ಜಾರಿಗೆ ತರು​ವುದು ಸಾಧ್ಯ​ವಿಲ್ಲ. ಈ ಬಗ್ಗೆ ನಿಮ್ಮನ್ನು ಒಳ​ಗೊಂಡು ಪ್ರತ್ಯೇಕ ಸಭೆ ನಡೆ​ಸು​ತ್ತೇನೆ. ಈಗ ಪ್ರತಿಭಟನೆ ಕೈ ಬಿಡಿ ಎಂದು ಮುಖ್ಯ​ಮಂತ್ರಿ ಮಾಡಿದ ಮನ​ವಿ ಮಾಡಿದ್ದಾರೆ.


ಆದರೆ ಇದಕ್ಕೆ ಒಪ್ಪದ ಪ್ರತಿ​ಭ​ಟ​ನಾ​ಕಾ​ರರು ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ಹೋರಾಟಗಾರರು ಮನವಿಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಅನಿವಾರ್ಯವಾಗಿ ಒಂದಷ್ಟು ಜನರನ್ನು ವಶಕ್ಕೆ ಪಡೆದು ಪ್ರತಿಭಟನಾಕಾರರು ಸ್ಥಳದಿಂದ ಚದುರುವಂತೆ ಮಾಡಿದರು. ಕೆಲವರನ್ನು ವಿವಿಧ ಪೊಲೀಸ್‌ ಠಾಣೆಗಳಿಗೆ ಕರೆದೊಯ್ದು ಊರುಗಳಿಗೆ ಹೋಗಲು ವ್ಯವಸ್ಥೆ ಮಾಡಲಾಯಿತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ