Webdunia - Bharat's app for daily news and videos

Install App

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಎಲ್ಲ ರೀತಿಯ ಚರ್ಚೆ ನಡೆದಿದೆ -ಸಿಎಂ

Webdunia
ಶನಿವಾರ, 2 ಜುಲೈ 2022 (19:49 IST)
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಎಲ್ಲ ರೀತಿಯ ಚರ್ಚೆ ನಡೆದಿದ್ದು, ಇಂದು ಮುಷ್ಕರ ಹಿಂಪಡೆಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಹೈದರಾಬಾದ್ಗೆ ತೆರಳುವ ಮುನ್ನ ಆರ್.ಟಿ ನಗರ ನಿವಾಸದ ಬಳಿ ಮಾತನಾಡಿದ ಸಿಎಂ, ಇಂದು ಮುಷ್ಕರ ಹಿಂಪಡೆಯುತ್ತಾರೆ. ಸಹಾನುಭೂತಿಯಿಂದ, ಮಾನವೀಯತೆಯಿಂದ ಕ್ರಮ ತೆಗೆದುಕೊಂಡು ಕಾನೂನು ಮಾಡಬೇಕೆಂದು ಕೊಂಡಿದ್ದೇವೆ. ಮೂರು ತಿಂಗಳಲ್ಲಿ ಯಾವ ರೀತಿ ನೇಮಕಾತಿ ಮಾಡಬೇಕು ಅನ್ನೋ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರ್ಯಾರಿಗೆ ನೇರ ಪಾವತಿ ಇದೆಯೋ ಅಂತಹವರನ್ನು ನೇಮಕಾತಿ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಕ್ರಮಕ್ಕೆ ಲೀಗಲ್ ಮತ್ತು ಟೆಕ್ನಿಕಲ್ ಆಗಿ ಏನು ಮಾಡಬೇಕು ಅನ್ನೋ ಬಗ್ಗೆ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳ ಜಂಟಿ ಸಮಿತಿ ಮಾಡಿದ್ದೇವೆ. ಪೌರಕಾರ್ಮಿಕರ ಸಂರಕ್ಷಣೆಗಾಗಿ ಹೆಲ್ತ್, ಎಜುಕೇಷನ್ ಬಗ್ಗೆ ಹೊಸ ಕಾನೂನನ್ನು ರಚನೆ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments