Webdunia - Bharat's app for daily news and videos

Install App

ನಮ್ಮ ಬಿಜೆಪಿಯಲ್ಲಿ ಒಂದು ರೋಗವಿದೆ,ಸುದ್ದಿ ಲೀಕ್ ಮಾಡ್ತಾರೆ: ಪ್ರತಾಪ್ ಸಿಂಹ

Webdunia
ಭಾನುವಾರ, 20 ಆಗಸ್ಟ್ 2017 (13:58 IST)
ಬಿಜೆಪಿ ಮುಖಂಡರಲ್ಲಿ ಒಂದು ರೋಗವಿದೆ. ಪಕ್ಷದ ಮಾಹಿತಿಗಳನ್ನು ಮಾಧ್ಯಮಗಳಿಗೆ ಲೀಕ್ ಮಾಡುತ್ತಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯುವಮೋರ್ಚಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಗರಕ್ಕೆ ಬಂದಾಗ, ಯುವಮೋರ್ಚಾ ಬಗ್ಗೆ ಪ್ರಶ್ನಿಸಿ ಹೋರಾಟದಲ್ಲಿ ಎಷ್ಟು ಬಾರಿ ಪೆಟ್ಟು ತಿಂದಿದ್ದಿರಿ, ಎಷ್ಟು ಬಾರಿ ಟಿಯರ್ ಗ್ಯಾಸ್ ಎದುರಿಸಿದ್ದೀರಿ ಎಂದು ಪ್ರಶ್ನಿಸಿದ್ದಾಗಿ ತಿಳಿಸಿದರು. 
 
ಯುವಮೋರ್ಚಾದ ಕೆಲಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎನ್ನುವಾಗಲೇ ಅರ್ಧಕ್ಕೆ ನಿಲ್ಲಿಸಿ ಎಂದು ಗುಡುಗಿದ ಅಮಿತ್ ಶಾ, ನೀವು ಉಗ್ರ ಹೋರಾಟ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾಗಿ ಮಾಹಿತಿ ನೀಡಿದರು.
 
ಅಮಿತ್ ಶಾ ನನಗೆ ಪ್ರಶ್ನಿಸಿದ್ದಾರೆ ಎಂದರೆ ಯುವಮೋರ್ಚಾಗೆ ಪ್ರಶ್ನಿಸಿದಂತೆ. ಆದ್ದರಿಂದ ಮುಂದೆ ಉಗ್ರ ಹೋರಾಟ ಮಾಡಬೇಕು. ಮತ್ತೆ ಅಮಿತ್ ಶಾ ಕೇಳುವಂತಹ ಪರಿಸ್ಥಿತಿ ತಂದುಕೊಳ್ಳಬಾರದು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
 
ಬರುಬರುತಾ ರಾಯರ ಕುದುರೆ ಕತ್ತೆ ಎನ್ನುವಂತಾಯಿತು. ಬಿಜೆಪಿ ಯುವಮೋರ್ಚಾ ನಡೆಸುತ್ತಿರುವ ಹೋರಾಟ ಕುಂಠಿತವಾಗಿದೆ. ಮುಂಬರುವ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಸಿದ್ದರಾಗಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕರೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments