Webdunia - Bharat's app for daily news and videos

Install App

ವಿನಯ್ ಗುರೂಜಿ ಹೆಸರಲ್ಲಿ ಹಣ ಪೀಕೋ ದಂಧೆ

Webdunia
ಬುಧವಾರ, 24 ಮೇ 2023 (12:20 IST)
ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಕಿಡಿಗೇಡಿಗಳು ಹಣ ಪೀಕಲು ಮುಂದಾದ ಪ್ರಸಂಗ ನಡೆದಿದೆ.
 
ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿರೋ ಕಿಡಿಗೇಡಿಗಳು, ಬದುಕಿನ ಬಗ್ಗೆ ಭಯ ಹುಟ್ಟಿಸುವ ಸಂದೇಶಗಳನ್ನ ಹಾಕುವ ಮೂಲಕ ಹಣಕ್ಕಾಗಿ ಪೀಡಿಸುತ್ತಿದ್ದಾರೆ.

ಅವಧೂತ ವಿನಯ್ ಗುರೂಜಿಯೇ ಮೆಸೇಜ್ ಮಾಡಿದಂತೆ ಮಾಡಿ ನಿಮ್ಮ ಡೇಟ್ ಆಫ್ ಬರ್ತ್ ಏನು?. ನಿಮಗೆ ಕಾಳಸರ್ಪ ದೋಷವಿದೆ. ನೀವು ಒಂದು ವಾರ ಮನೆ ಬಿಟ್ಟು ಹೋಗಬಾರದು, ಪಾರ್ಕ್, ಹೊರಗಡೆ ಎಲ್ಲೂ ಹೋಗಬಾರದು. ನಿಮಗೆ ದೇವರ ಮೇಲೆ ನಂಬಿಕೆ ಇಲ್ಲ ಅನಿಸತ್ತೆ. ನಿಮ್ಮನ್ನು ದೇವರೇ ಕಾಪಾಡಬೇಕು. 45 ದಿನದಲ್ಲಿ ನಿಮಗೆ ದೋಷ ಇದೆ ಎಂದು ಭಯ ಹುಟ್ಟಿಸುವಂತಹ ಸಂದೇಶಗಳನ್ನು ಕಳುಹಿಸಿ ಹಣ ಕೀಳುವ ದಂಧೆ ಆರಂಭಿಸಿದ್ದಾರೆ. 

ಈ ಸಂದೇಶಗಳ ಬಗ್ಗೆ ಸ್ಪಷ್ಟಪಡಿಸಿರೋ ಮಠದ ಸಿಬ್ಬಂದಿ ಆ ರೀತಿ ಗುರುಗಳು ಯಾರಿಗೂ ಮೆಸೇಜ್ ಮಾಡುವುದಿಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಸಾಮಾಜಿಕ ಜಾಲತಾಣವನ್ನ ದುರುಪಯೋಗಪಡಿಸಿಕೊಂಡು ಮಠ, ಸ್ವಾಮಿಜಿಯ ಹೆಸರನ್ನ ಹಾಳು ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಕಿಡಿಗೇಡಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments