Webdunia - Bharat's app for daily news and videos

Install App

ರಾಜ್ಯದಲ್ಲಿ ಸೂತಕದ ವಾತಾವರಣ ಇದೆ ಕಾಂಗ್ರೆಸ್ ಗೆ ಇದೆಲ್ಲಾ ಬೇಕಾ ..?

Webdunia
ಬುಧವಾರ, 3 ಆಗಸ್ಟ್ 2022 (15:48 IST)
ರಾಜ್ಯದ ವಿವಿಧೆಡೆ ಮಳೆಯಿಂದಾಗಿ 13 ಜನ ಮೃತಪಟ್ಟಿದ್ದಾರೆ. ಮಳೆ,  ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರ ನೆರವು ನೀಡಲಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿಕೆ ನೀಡಿದರು. ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಳೆಯಿಂದಾಗಿ ಸಾವಿರಾರರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ರಾಹುಲ್ ಗಾಂಧಿ ಬಂದಿದ್ದಾರೆ. ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮ ಆಚರಿಸಿಕೊಳ್ತಿದ್ದಾರೆ. ಜನ್ಮದಿನ ಮಾಡಿಕೊಳ್ಳಲಿ, ನಾನು ಶುಭ ಕೋರುತ್ತೇನೆ. ರಾಜ್ಯದಲ್ಲಿ ಈಗ ಸೂತಕದ ವಾತಾವರಣ ಇದೆ. ಈ ಸಂದರ್ಭದಲ್ಲಿ ಸಂಭ್ರಮ ಬೇಕಿತ್ತಾ ಎಂದು ರವಿಕುಮಾರ್ ಪ್ರಶ್ನಿಸಿದರು. ನಾವು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋಜಿಸಿದ್ದೆವು. ಮಂಗಳೂರು ಘಟನೆ ನಡೆದ ಬಳಿಕ ರಾತ್ರಿ ಸುದ್ದಿಗೋಷ್ಟಿ ಕರೆದು ರದ್ದು ಮಾಡಿದೆವು. ಇಂದು 13ಜನ ಸಾವನ್ನಪ್ಪಿದ್ದಾರೆ, ಸಾವಿರಾರು ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಂದು ಸಂಭ್ರಮ ಆಚರಿಸಬೇಕಿತ್ತಾ. ಅದನ್ನು ಸ್ವಲ್ಪ ಯೋಚಿಸಲಿ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments