Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕಿಳಿಸಲು ಚರ್ಚೆ ಆಗ್ತಿದೆ : ಯಡಿಯೂರಪ್ಪ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕಿಳಿಸಲು ಚರ್ಚೆ ಆಗ್ತಿದೆ : ಯಡಿಯೂರಪ್ಪ
bangalore , ಗುರುವಾರ, 30 ಮಾರ್ಚ್ 2023 (20:30 IST)
ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ. ನಿಮ್ಮ ನಾಯಕ ಯಾರು? ರಾಹುಲ್‌ ಗಾಂಧಿ, ಮೋದಿ ಅಷ್ಟು ಎತ್ತರಕ್ಕೆ ಬೆಳೆಯುತ್ತಾರಾ ಅವರು? ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ...ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ 60-70 ಸೀಟಿಗೆ ಸೀಮಿತ ಆಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಇನ್ನು ಎರಡ್ಮೂರು ಸುತ್ತು ರಾಜ್ಯಕ್ಕೆ ಬರುವವರಿದ್ದಾರೆ. ಶಿವಮೊಗ್ಗ ವಿಮಾನ ಲ್ದಾಣ ಉದ್ಘಾಟನೆಗೆ 2 ಲಕ್ಷ ಜನರು ಬಂದಿದ್ದರಿಂದ ನಿಲ್ಲಲು ಜಾಗವಿಲ್ಲದೇ ಕಷ್ಟವಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಂದಾಗ ಜನ ಬೆಂಬಲ ನೋಡಿದ್ರೆ ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದ್ರು.ಇನ್ನು ಇದೇ ವೇಳೆ ಮೀಸಲಾತಿ ವಿಚಾರ ಪ್ರಸ್ತಾಪಿಸಿ, ಮೀಸಲಾತಿ ಪ್ರಮಾಣವನ್ನು ಏರಿಸುವ ಮೂಲಕ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ. ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ. EWS ವಿಭಾಗದಲ್ಲಿ ಅವರಿಗೆ ಮೀಸಲಾತಿ ನೀಡಲಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು